24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

ಬೆಳ್ತಂಗಡಿ: ಮಹೇಶ ಶೆಟ್ಟಿ ತಿಮರೋಡಿ ಅವರನ್ನು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶದ ಬಳಿಕ ಸಂಜೆ ಪೊಲೀಸರು ಮತ್ತೆ ಹಾಜರು ಪಡಿಸಿದ್ದು ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಬ್ರಹ್ಮಾವರ ಪೊಲೀಸರು ಅರ್ಜಿ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಾಗೇಶ್ ಅವರು ತಿಮರೋಡಿ ಅವರನ್ನು ಕೋರ್ಟಿಗೆ ಹಾಜರುಪಡಿಸುವಂತೆ ಆದೇಶ ನೀಡಿದರು. ಅದರಂತೆ ಪೊಲೀಸರು ಹಿರಿಯಡ್ಕ ಜೈಲಿನಲ್ಲಿದ್ದ ತಿಮರೋಡಿ ಅವರನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಮಧ್ಯಾಹ್ನ 1:30 ಸುಮಾರಿಗೆ ಕೋರ್ಟಿಗೆ ಹಾಜರು ಪಡಿಸಿದರುಬಳಿಕ ನ್ಯಾಯಾಧೀಶರು ತಿಮರೋಡಿ ಅವರನ್ನು ವಿಚಾರಣೆಗಾಗಿ ಪೊಲೀಸ್ ಎರಡು ಗಂಟೆ ಕಸ್ಟಡಿಗೆ ನೀಡಿದ್ದು, ಮಧ್ಯಾಹ್ನ 3:40ಕ್ಕೆ ಮತ್ತೆ ಕೋರ್ಟ್ ಗೆ ಹಾಜರುಪಡಿಸುವಂತೆ ಆದೇಶಿಸಿದರು.

ಅದರಂತೆ ಕಸ್ಟಡಿಗೆ ಪಡೆದುಕೊಂಡ ಪೊಲೀಸರು, ವಿಚಾರಣೆಗಾಗಿ ತಿಮರೋಡಿ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ ಬಳಿಕ ಮತ್ತೆ ಕೋಟಿ೯ಗೆ ಹಾಜರು ಪಡಿಸಿದ್ದರು. ನ್ಯಾಯಾಲಯ ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ನೀಡಿದೆ.

Related posts

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

Suddi Udaya

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya
error: Content is protected !!