July 23, 2026
ಪ್ರಮುಖ ಸುದ್ದಿ

ಸುಲ್ಕೇರಿಮೊಗ್ರು: ಅಡಿಕೆ ತೋಟದಲ್ಲಿ ಜಾಷಧಿ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಮೃತ್ಯು

ಬೆಳ್ತಂಗಡಿ: ಅಡಿಕೆ ಮರವೇರಿ ಜಾಷಧ ಸಿಂಪಡಿಸುತ್ತಿದ್ದ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಆ.22ರಂದು ಸಲ್ಕೇರಿಮೊಗ್ರುನಲ್ಲಿ ಸಂಭವಿಸಿದೆ.

ಸುಲ್ಕೇರಿ ಮೊಗ್ರು ಗ್ರಾಮದ ಹಿತ್ತಿಲು ಮನೆ ಗಂಗಯ್ಯ ನಾಯ್ಕ(62ವ), ಮೃತ ಪಟ್ಟವರು.ಗಂಗಯ್ಯ ನಾಯ್ಕ ಎಂಬವರು ಆ. 22ರಂದು 12.45ಕ್ಕೆ ತಮ್ಮ ಅಡಿಕೆ ತೋಟದಲ್ಲಿ ಪುತ್ರ ಪ್ರದೀಪ್ ಜೊತೆ ಜಾಷಧಿ ಸಿಂಪಡಣೆಗೆ ತಯಾರಿ ನಡೆಸಿ, ಗಂಗಯ್ಯ ನಾಯ್ಕ ಅವರು ಅಡಿಕೆ ತೋಟದಲ್ಲಿ ಅಡಿಕೆ ಮರಕ್ಕೆ ಹತ್ತಿ ಮದ್ದು ಸಿಂಪಡಿಸುತ್ತಿರುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ಸುಮಾರು 30 ಅಡಿ ಎತ್ತರದಿಂದ ಕೆಳಗೆ ಕವುಚಿ ಬಿದ್ದರೆನ್ನಲಾಗಿದೆ. ಪ್ರಜ್ಞಾಹೀನರಾಗಿದ್ದವರನ್ನು ಪುತ್ರ ಪ್ರದೀಪ್ ಮತ್ತಿತರರು ಸೇರಿ ಎತ್ತಿ ಉಪಚರಿಸಿ, ಅಂಬುಲೆನ್ಸ್‌ ವಾಹನವೊಂದರಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರುಸಂಜೆ ಮೃತಪಟ್ಟದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya
error: Content is protected !!