July 23, 2026
ಗ್ರಾಮಾಂತರ ಸುದ್ದಿ

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

ಪೆರಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪೆರಾಡಿ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಇವರ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ಆ. 24 ರಂದು ನಡೆಯಿತು.ಸಂಘದ ಸದಸ್ಯರ ಸಹಕಾರ ಮತ್ತು ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದ ಫಲವಾಗಿ 2024-25 ನೇ ಸಾಲಿನಲ್ಲಿ ಸಂಘವು ರೂ.359 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ1.00 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 20 ಡಿವಿಡೆಂಟ್ ಘೋಷಣೆ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಸತೀಶ್ ಕೆ.ಕಾಶಿಪಟ್ಣ ಹೇಳಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಶ್ರೀಪತಿ ಉಪಾಧ್ಯಾಯ, ನಿರ್ದೇಶಕರಾದ ಎನ್.ಆರ್ ಸೀತರಾಮ ರೈ,ಪ್ರವೀಣ್ ಗಿಲ್ಬರ್ಟ್ ಪಿಂಟೋ,ದೇವಕಿ ಡಿ ಶೆಟ್ಟಿ, ಸುಜಾತ,ಕೃಷ್ಣಪ್ಪ, ರಾಜೇಶ್ ಎನ್ ಶೆಟ್ಟಿ, ಸುರೇಶ್ ಅಂಚನ್,ಅಕ್ಷಯ ಕುಮಾರ್,ವಿಜಯ ನಾಯ್ಕ,ದ.ಕ ಜಿ.ಕೇಂದ್ರ ಬ್ಯಾಂಕ್ ಪ್ರತಿನಿಥಿ ಸುದರ್ಶನ್ ಕೋಟ್ಯಾನ್,ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ಲತೀಫ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರಾಗಿದ್ದ ಹರಿಪ್ರಸಾದ್ ಹಾಗೂ ಪುತ್ತು ನಾಯ್ಕ ಮತ್ತು 32 ಸದಸ್ಯರು ನಿಧನರಾಗಿದ್ದು ಅವರಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.ರೈತ ಸದಸ್ಯರು ಸಂಘದ ಪ್ರಗತಿ ಹಾಗೂ ಸಹಕಾರದ ಬಗ್ಗೆ ಸೂಕ್ತ ಸಲಹೆ ಸೂಚನೆ ನೀಡಿದರು.

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಾ ಅವರು ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷರಾದ ಶ್ರೀಪತಿ ಉಪಾಧ್ಯಾಯ ಸ್ವಾಗತಿಸಿದರು. ಸಿಬ್ಬಂದಿಗಳಾದ ಕವಿತಾ,ಅಕ್ಷತಾ ಪ್ರಾರ್ಥನೆಗೈದರು.

Related posts

ಶ್ರೀ ಗುರುದೇವ ಸಹಕಾರ ಸಂಘದ 28ನೇ ಶಾಖೆ ಗುರುಪುರ-ಕೈಕಂಬದಲ್ಲಿ ಉದ್ಘಾಟನೆ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya
error: Content is protected !!