22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

ಪೆರಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪೆರಾಡಿ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಇವರ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ಆ. 24 ರಂದು ನಡೆಯಿತು.ಸಂಘದ ಸದಸ್ಯರ ಸಹಕಾರ ಮತ್ತು ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದ ಫಲವಾಗಿ 2024-25 ನೇ ಸಾಲಿನಲ್ಲಿ ಸಂಘವು ರೂ.359 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ1.00 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 20 ಡಿವಿಡೆಂಟ್ ಘೋಷಣೆ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಸತೀಶ್ ಕೆ.ಕಾಶಿಪಟ್ಣ ಹೇಳಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಶ್ರೀಪತಿ ಉಪಾಧ್ಯಾಯ, ನಿರ್ದೇಶಕರಾದ ಎನ್.ಆರ್ ಸೀತರಾಮ ರೈ,ಪ್ರವೀಣ್ ಗಿಲ್ಬರ್ಟ್ ಪಿಂಟೋ,ದೇವಕಿ ಡಿ ಶೆಟ್ಟಿ, ಸುಜಾತ,ಕೃಷ್ಣಪ್ಪ, ರಾಜೇಶ್ ಎನ್ ಶೆಟ್ಟಿ, ಸುರೇಶ್ ಅಂಚನ್,ಅಕ್ಷಯ ಕುಮಾರ್,ವಿಜಯ ನಾಯ್ಕ,ದ.ಕ ಜಿ.ಕೇಂದ್ರ ಬ್ಯಾಂಕ್ ಪ್ರತಿನಿಥಿ ಸುದರ್ಶನ್ ಕೋಟ್ಯಾನ್,ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ಲತೀಫ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರಾಗಿದ್ದ ಹರಿಪ್ರಸಾದ್ ಹಾಗೂ ಪುತ್ತು ನಾಯ್ಕ ಮತ್ತು 32 ಸದಸ್ಯರು ನಿಧನರಾಗಿದ್ದು ಅವರಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.ರೈತ ಸದಸ್ಯರು ಸಂಘದ ಪ್ರಗತಿ ಹಾಗೂ ಸಹಕಾರದ ಬಗ್ಗೆ ಸೂಕ್ತ ಸಲಹೆ ಸೂಚನೆ ನೀಡಿದರು.

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಾ ಅವರು ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷರಾದ ಶ್ರೀಪತಿ ಉಪಾಧ್ಯಾಯ ಸ್ವಾಗತಿಸಿದರು. ಸಿಬ್ಬಂದಿಗಳಾದ ಕವಿತಾ,ಅಕ್ಷತಾ ಪ್ರಾರ್ಥನೆಗೈದರು.

Related posts

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya
error: Content is protected !!