23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

ಮಚ್ಚಿನ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಮಚ್ಚಿನ ನಮನ ಹಾಲ್ ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪಕ್ಷದ ಪ್ರಮುಖರು ಹಿರಿಯರಾದ ಪದ್ಮನಾಭ ಅರ್ಕಜೆ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಮತಿ ವಸಂತಿ ಲಕ್ಷ್ಮಣರವರು ಉದ್ಘಾಟನಾ ಭಾಷಣ ಮಾಡಿದರು. ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಂಡಲ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಡoತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗೋಪಾಲ ಕೃಷ್ಣ. ಕೆ, ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಚಂದ್ರಕಾಂತ ಗೌಡ ನಿಡ್ಡಾಜೆ ಬೈಠಕ್ ನೀಡಿದರು. ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್, ಮಚ್ಚಿನ ಪಂಚಾಯತ್ ಅಧ್ಯಕ್ಷರಾದ ರುಕ್ಮಿಣಿ, ಅಭ್ಯಾಸ ವರ್ಗ ಪ್ರಭಾರಿ ವಿಶ್ವನಾಥ ಹಾರಾಬೆ, ಮಚ್ಚಿನ ಶಕ್ತಿ ಕೇಂದ್ರ ಪ್ರಮುಖ್ ನಾರಾಯಣ ಶೆಟ್ಟಿ ನೆತ್ತರ, ಪ್ರಮುಖರು, ಜನಪ್ರತಿನಿದಿನಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು ನಾರಾಯಣ ಶೆಟ್ಟಿ ನೆತ್ತರ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!