23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.26-28: ರಾ.ಹಿಂ.ಜಾ.ವೇದಿಕೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 28ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, ಬೆಳ್ತಂಗಡಿ ತಾಲೂಕು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ಶಿರೋಮಣಿ ಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ 28ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು
ಶ್ರೀ ಗಣೇಶೋತ್ಸವವು ಉಜಿರೆಯ ಕುಂಜರ್ಪದಲ್ಲಿ ಆ.26 ರಿಂದ 28ರವರೆಗೆ ಜರುಗಲಿದೆ.

ಆ.26ರಂದು ಬೆಳಿಗ್ಗೆ ಸಾಮೂಹಿಕ ಗೌರಿ ಪೂಜೆ ಪ್ರಾರಂಭಗೊಂಡು ಮಧ್ಯಾಹ್ನ ಮಹಾಪೂಜೆ ನೆರವೇರಿತು. ಸಂಜೆ ಸಾಮ ಪಾರಾಯಣ, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಣಿ ಕೋಟೆಬಾಗಿಲು ನಿರ್ದೇಶನದ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯಿಸುವ “ಕದಂಬ” ತುಳು ಹಾಸ್ಯಮಯ ನಾಟಕ ಜರುಗಲಿರುವುದು.

ಆ.27ರಂದು ಬೆಳಿಗ್ಗೆ ಗಣಪತಿ ಮೂರ್ತಿ ಪ್ರತಿಷ್ಠೆ, ಗಣಹೋಮ, ತಾಲೂಕಿನ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಗಾನ ನೃತ್ಯ ಅಕಾಡೆಮಿ ತಂಡ ಮಂಗಳೂರು ಇವರಿಂದ ಗುರು ವಿಧ್ಯಾಶ್ರೀ ರಾಧಾಕೃಷ್ಣ ನಿರ್ದೇಶನದ ನೃತ್ಯ ಸಂಗಮ, ಸಂಜೆ ಭಜನಾ ಕಾರ್ಯಕ್ರಮ, ಮಹಾಪೂಜೆ, ಭಜನಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭಾಸ್ಕರ್ ಕೋಟ್ಯಾನ್ ಸಸಿಹಿತ್ತು ಸಾರಥ್ಯದ ನರೇಶ್ ಕುಮಾ‌ರ್ ಸಸಿಹಿತ್ತು ನಿರ್ದೇಶನದ ತ್ರಿನೇತ್ರ ಕಲಾವಿದರು ಕುಡ್ಲ ಅರ್ಪಿಸುವ ಎಲ್.ಇ.ಡಿ ತಂತ್ರಜ್ಞಾನದ ಕ್ಷುದ್ರ ಶಕ್ತಿಯೊಂದರ ಭಯಾನಕ ಕತೆ ತುಳುರಂಗಭೂಮಿಯಲ್ಲಿ ವಿನೂತನ ಪ್ರಯೋಗದ ಅದ್ಧೂರಿ ತುಳು ನಾಟಕ ಬ್ರಹ್ಮರಕ್ಷಣೆ ಪ್ರದರ್ಶನ ಜರಗಲಿರುವುದು.

ಆ.28ರಂದು ಬೆಳಗ್ಗಿನ ಪೂಜೆ, 108 ತೆಂಗಿನಕಾಯಿ ಗಣಹೋಮ, ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಝೀ ಕನ್ನಡ ಡಾನ್ಸ್ ಕರ್ನಾಟಕ ಡಾನ್ಸ್ ಖ್ಯಾತಿಯ ಜಿತೇಶ್ ಕುಮಾರ್ ನೇತೃತ್ವದ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ತಂಡದಿಂದ ನೃತ್ಯ ವೈಭವ, ಸಂಜೆ ಶ್ರೀ ಶಾರದ ಅಂಧರ ಗೀತ-ಗಾನ ಕಾಲ ಸಂಘ(ರಿ.) ಶೃಂಗೇರಿ ಇವರಿಂದ ರಸಮಂಜರಿ, ಸಂಜೆ ಮಹಾಪೂಜೆ, ವಿಘ್ನ ವಿನಾಶಕನ ವರ್ಣರಂಜಿತ ಶೋಭಾಯಾತ್ರೆ ಪ್ರಾರಂಭವಾಗುವುದು. ರಾತ್ರಿ ಉಜಿರೆಯ ಪೇಟೆಯಲ್ಲಿ ಕಲರ್ಸ್ ಕನ್ನಡ ಎದೆ ತುಂಬಿ ಹಾಡುವೆನು ಖ್ಯಾತಿಯ ಸಂದೇಶ್ ನೀರುಮಾರ್ಗ ಹಾಗೂ ಬಳಗದವರಿಂದ ಭಕ್ತಿ ಗಾನಾಮೃತ ಜರಗುವುದು. ಶೋಭಾಯಾತ್ರೆಯ ಸಮಯದಲ್ಲಿ ಭಜನಾ ತಂಡಗಳಿಂದ ಭಜನೆ, ಚೆಂಡೆ, ನಾಸಿಕ್ ಬ್ಯಾಂಡ್, ಟ್ಯಾಬ್ಲೊ, ಕೀಲುಕುದುರೆ, ಸುಡುಮದ್ದು ಪ್ರದರ್ಶನ ನಡೆಯಲಿದೆ.

Related posts

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ..

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya
error: Content is protected !!