July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಯಂ ಪಾಲಿಟೆಕ್ನಿಕ್ – ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಜಿರೆ : ಎಸ್ ಡಿ ಯಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವೀರೇಂದ್ರ ಹೆಗ್ಗಡೆಯವರ ಆಶಯದಂತೆ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಬದ್ದತೆ ಮತ್ತು ಸಾಮಾಜಿಕ ಕಳಕಳಿ ಭಾವನೆಯನ್ನು ಜಾಗೃತಗೊಳಿಸುವ ಉದ್ದೇಶದಿಂದ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ , ರೋಟರಿ ಕ್ಲಬ್, ಬೆಳ್ತಂಗಡಿ ಇವರ ಜಂಟಿ ಸಹಭಾಗಿತ್ವದೊಂದಿಗೆ ಮಂಗಳೂರಿನ ರೆಡ್ ಕ್ರಾಸ್ ರಕ್ತನಿಧಿ ಘಟಕದಿಂದ ಆ.23 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.

ಶಿಬಿರವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಡಾ.ದಯಾಕರ್ ಉದ್ಘಾಟಿಸಿ ಶುಭಹಾರೈಸಿದರು, ರೆಡ್ ಕ್ರಾಸ್ ರಕ್ತನಿಧಿಯ ಅಧಿಕಾರಿ ಪ್ರವೀಣ್ ಕುಮಾರ್ ರಕ್ತದಾನದ ಮಹತ್ವವನ್ನು ವಿವರಿಸಿದರು. ಸ್ವಯಂ ಸೇವಕಿ ಸ್ವಸ್ತಿ ರಕ್ತದ ಗುಂಪುಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂತೋಷ್, ಎಸ್ ಡಿ ಯಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಯೋಗಾಲಯ ಅಧಿಕಾರಿ ಶಿತಿಕಂಠ ಭಟ್, ಎನ್ ಯಸ್ ಯಸ್ ಯೋಜನಾಧಿಕಾರಿ ಪ್ರಕಾಶ್ ಗೌಡ, ವೈ ಆರ್ ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ ಉಪಸ್ಥಿತರಿದ್ದರು. ಸ್ವಯಂ ಸೇವಕ ಹರ್ಷಿತ್ ಸ್ವಾಗತಿಸಿ, ದಿಲನ್ ವಂದಿಸಿದರು. ವಿದ್ಯಾರ್ಥಿ ಶ್ರೇಯಸ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಒಟ್ಟು 67 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related posts

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya
error: Content is protected !!