26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

ಕೊಕ್ಕಡ: ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ ಆ. 24 ರಂದು ಯುವದಿನ ಆಚರಿಸಲಾಯಿತು.

ಯುವಜನರಲ್ಲಿ ಸ್ವಾವಲಂಬನೆಯನ್ನು ಬೆಳೆಸಲು ಸ್ವ ಉದ್ಯೋಗ ಮಾಹಿತಿ ತರಬೇತಿ ನೀಡಲಾಯಿತು. ಚರ್ಚಿನ ಧರ್ಮಗುರುಗಳಾದ ವಂ. ಅನಿಲ್ ಪ್ರಕಾಶ್ ಡಿ ಸಿಲ್ವ ಕಾರ್ಯಕ್ರಮ ಉದ್ಘಾಟಿಸಿದರು.
ಉಜಿರೆ ರುಡಸೆಟ್ ಸಂಸ್ಥೆಯ ಪ್ರಾಧ್ಯಾಪಕ ಅಬ್ರಹಾಂ ಜೇಮ್ಸ್ ಪಿ.ವಿ. ಅವರು ಸ್ವಾವಲಂಬನೆಯ ಜೀವನ ಸಾಗಿಸಲು ಅಗತ್ಯ ಇರುವ ವಿವಿಧ ಸ್ವ ಉದ್ಯೋಗದ ತರಬೇತಿ ನೀಡಿದರು.

ರಿತೇಶ್ ಯಂ. ಸ್ಟ್ರೆಲ್ಲ ಪ್ರಾಸ್ತಾವಿಕ ಭಾಷಣ ಮಾಡಿದರು. ವಿಕ್ಟರ್ ಸುವಾರಿಸ್ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು.
ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಲಿಯ ಉಪಾಧ್ಯಕ್ಷ ಪ್ರವೀಣ್ ನೋಯೆಲ್ ಮೊಂತೆರೋ, ಕಾರ್ಯದರ್ಶಿ ವೀಣಾ ಮಸ್ಕರೇನ್ಹಸ್, ಸರ್ವ ಆಯೋಗಗಳ ಸಂಚಾಲಕಿ ಶ್ರೀಮತಿ ವಿನಿಫ್ರೆಡ್ ಡಿ ಸೋಜ ಉಪಸ್ಥಿತರಿದ್ದರು.

ಯುವದಿನದ ಪ್ರಯುಕ್ತ ಶಿಬಿರಾರ್ಥಿ ಯುವಕ, ಯುವತಿಯರನ್ನು ಸನ್ಮಾನಿಸಲಾಯಿತು. ಜೆಸಿಂತಾ ಡಿ ಸೋಜಾ ಸ್ವಾಗತಿಸಿ, ಪ್ರೀತಿ ಮರಿಯಾ ವಂದಿಸಿದರು.

ಪ್ರಜ್ವಲ್ ಲೋಬೊ ಕಾರ್ಯಕ್ರಮ ನಿರೂಪಿಸಿದರು. ಮೌರಿಸ್ ಡಿ ಸೋಜಾ, ವಿನ್ಸೆಂಟ್ ಮಿನೇಜಸ್, ವಿನ್ಸೆಂಟ್ ಸುವಾರಿಸ್, ದೀಪ ವಿ, ವಂ. ಅಶೋಕ ಡಿ ಸೋಜಾ ಸಹರಿಸಿದರು.

Related posts

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya
error: Content is protected !!