July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

ಕೊಕ್ಕಡ: ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ ಆ. 24 ರಂದು ಯುವದಿನ ಆಚರಿಸಲಾಯಿತು.

ಯುವಜನರಲ್ಲಿ ಸ್ವಾವಲಂಬನೆಯನ್ನು ಬೆಳೆಸಲು ಸ್ವ ಉದ್ಯೋಗ ಮಾಹಿತಿ ತರಬೇತಿ ನೀಡಲಾಯಿತು. ಚರ್ಚಿನ ಧರ್ಮಗುರುಗಳಾದ ವಂ. ಅನಿಲ್ ಪ್ರಕಾಶ್ ಡಿ ಸಿಲ್ವ ಕಾರ್ಯಕ್ರಮ ಉದ್ಘಾಟಿಸಿದರು.
ಉಜಿರೆ ರುಡಸೆಟ್ ಸಂಸ್ಥೆಯ ಪ್ರಾಧ್ಯಾಪಕ ಅಬ್ರಹಾಂ ಜೇಮ್ಸ್ ಪಿ.ವಿ. ಅವರು ಸ್ವಾವಲಂಬನೆಯ ಜೀವನ ಸಾಗಿಸಲು ಅಗತ್ಯ ಇರುವ ವಿವಿಧ ಸ್ವ ಉದ್ಯೋಗದ ತರಬೇತಿ ನೀಡಿದರು.

ರಿತೇಶ್ ಯಂ. ಸ್ಟ್ರೆಲ್ಲ ಪ್ರಾಸ್ತಾವಿಕ ಭಾಷಣ ಮಾಡಿದರು. ವಿಕ್ಟರ್ ಸುವಾರಿಸ್ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು.
ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಲಿಯ ಉಪಾಧ್ಯಕ್ಷ ಪ್ರವೀಣ್ ನೋಯೆಲ್ ಮೊಂತೆರೋ, ಕಾರ್ಯದರ್ಶಿ ವೀಣಾ ಮಸ್ಕರೇನ್ಹಸ್, ಸರ್ವ ಆಯೋಗಗಳ ಸಂಚಾಲಕಿ ಶ್ರೀಮತಿ ವಿನಿಫ್ರೆಡ್ ಡಿ ಸೋಜ ಉಪಸ್ಥಿತರಿದ್ದರು.

ಯುವದಿನದ ಪ್ರಯುಕ್ತ ಶಿಬಿರಾರ್ಥಿ ಯುವಕ, ಯುವತಿಯರನ್ನು ಸನ್ಮಾನಿಸಲಾಯಿತು. ಜೆಸಿಂತಾ ಡಿ ಸೋಜಾ ಸ್ವಾಗತಿಸಿ, ಪ್ರೀತಿ ಮರಿಯಾ ವಂದಿಸಿದರು.

ಪ್ರಜ್ವಲ್ ಲೋಬೊ ಕಾರ್ಯಕ್ರಮ ನಿರೂಪಿಸಿದರು. ಮೌರಿಸ್ ಡಿ ಸೋಜಾ, ವಿನ್ಸೆಂಟ್ ಮಿನೇಜಸ್, ವಿನ್ಸೆಂಟ್ ಸುವಾರಿಸ್, ದೀಪ ವಿ, ವಂ. ಅಶೋಕ ಡಿ ಸೋಜಾ ಸಹರಿಸಿದರು.

Related posts

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya

ಪಿಯುಸಿ ಫಲಿತಾಂಶ: ಶ್ರೀದೇವಿ ಕಲಾ ವಿಭಾಗದಲ್ಲಿ ವಾಣಿ ಕಾಲೇಜಿಗೆ ಪ್ರಥಮ

Suddi Udaya

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya
error: Content is protected !!