30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

ಕೊಕ್ಕಡ: ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ ಆ. 24 ರಂದು ಯುವದಿನ ಆಚರಿಸಲಾಯಿತು.

ಯುವಜನರಲ್ಲಿ ಸ್ವಾವಲಂಬನೆಯನ್ನು ಬೆಳೆಸಲು ಸ್ವ ಉದ್ಯೋಗ ಮಾಹಿತಿ ತರಬೇತಿ ನೀಡಲಾಯಿತು. ಚರ್ಚಿನ ಧರ್ಮಗುರುಗಳಾದ ವಂ. ಅನಿಲ್ ಪ್ರಕಾಶ್ ಡಿ ಸಿಲ್ವ ಕಾರ್ಯಕ್ರಮ ಉದ್ಘಾಟಿಸಿದರು.
ಉಜಿರೆ ರುಡಸೆಟ್ ಸಂಸ್ಥೆಯ ಪ್ರಾಧ್ಯಾಪಕ ಅಬ್ರಹಾಂ ಜೇಮ್ಸ್ ಪಿ.ವಿ. ಅವರು ಸ್ವಾವಲಂಬನೆಯ ಜೀವನ ಸಾಗಿಸಲು ಅಗತ್ಯ ಇರುವ ವಿವಿಧ ಸ್ವ ಉದ್ಯೋಗದ ತರಬೇತಿ ನೀಡಿದರು.

ರಿತೇಶ್ ಯಂ. ಸ್ಟ್ರೆಲ್ಲ ಪ್ರಾಸ್ತಾವಿಕ ಭಾಷಣ ಮಾಡಿದರು. ವಿಕ್ಟರ್ ಸುವಾರಿಸ್ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು.
ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಲಿಯ ಉಪಾಧ್ಯಕ್ಷ ಪ್ರವೀಣ್ ನೋಯೆಲ್ ಮೊಂತೆರೋ, ಕಾರ್ಯದರ್ಶಿ ವೀಣಾ ಮಸ್ಕರೇನ್ಹಸ್, ಸರ್ವ ಆಯೋಗಗಳ ಸಂಚಾಲಕಿ ಶ್ರೀಮತಿ ವಿನಿಫ್ರೆಡ್ ಡಿ ಸೋಜ ಉಪಸ್ಥಿತರಿದ್ದರು.

ಯುವದಿನದ ಪ್ರಯುಕ್ತ ಶಿಬಿರಾರ್ಥಿ ಯುವಕ, ಯುವತಿಯರನ್ನು ಸನ್ಮಾನಿಸಲಾಯಿತು. ಜೆಸಿಂತಾ ಡಿ ಸೋಜಾ ಸ್ವಾಗತಿಸಿ, ಪ್ರೀತಿ ಮರಿಯಾ ವಂದಿಸಿದರು.

ಪ್ರಜ್ವಲ್ ಲೋಬೊ ಕಾರ್ಯಕ್ರಮ ನಿರೂಪಿಸಿದರು. ಮೌರಿಸ್ ಡಿ ಸೋಜಾ, ವಿನ್ಸೆಂಟ್ ಮಿನೇಜಸ್, ವಿನ್ಸೆಂಟ್ ಸುವಾರಿಸ್, ದೀಪ ವಿ, ವಂ. ಅಶೋಕ ಡಿ ಸೋಜಾ ಸಹರಿಸಿದರು.

Related posts

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

Suddi Udaya
error: Content is protected !!