September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

ಗುಂಡೂರಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯ ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಲಕ್ಷ್ಮಿ ನಾರಾಯಣ ಕಾರಂತ ಇವರ ಪೌರೋಹಿತ್ಯದಲ್ಲಿ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಿದ್ದಕಟ್ಟೆ ಗುಣಶ್ರೀ ಶಾಲೆಯ ಯೋಗ ಶಿಕ್ಷಕರಾದ ಶ್ರೀಮತಿ ಶಶಿಕಲಾ ರವರು ಸಂಸ್ಕೃತಿ, ಸಂಸ್ಕಾರ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಪೂಜಾರಿ ಯವರು ಯೋಜನೆಯಿಂದ ಅದ ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆ ಬಗ್ಗೆ ತಿಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು,

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷ ಸಂಗೀತ ,ಉಷಾ ಹಾಗೂ ಒಕ್ಕೂಟ ಅಧ್ಯಕ್ಷ ಸದಾನಂದ ಪೂಜಾರಿ, ಹಾಗೂ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಸೇಸಪ್ಪ ಪೂಜಾರಿ ಉಪಸ್ಥಿತರಿದ್ದರು.

ಸಮಿತಿ ಕಾರ್ಯದರ್ಶಿ ಸೌಜನ್ಯ ಜೈನ ವರದಿ ವಾಚಿಸಿದರು. ಒಕ್ಕೂಟ ಕಾರ್ಯದರ್ಶಿ ಪ್ರವೀಣ್ ಆಚಾರ್ಯ ಸ್ವಾಗತಿಸಿ, ಸೇವಾಪ್ರತಿನಿಧಿ ಹರೀಶ್ ಬಾಡರು ಧನ್ಯವಾದ ವಿತ್ತರು.

Related posts

ರೆಖ್ಯ: ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ರೆಖ್ಯ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya
error: Content is protected !!