22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ, ಆ. 23 ರಂದು ನಡೆದ ವಿವಿಧ ಸಾಮಾಜಿಕ ಮತ್ತು ಶಿಕ್ಷಣಾತ್ಮಕ ಕಾರ್ಯಕ್ರಮಗಳಲ್ಲಿ ವಲಯ ಅಧ್ಯಕ್ಷ ಅಭಿಲಾಶ್ ಬಿ ಎ ಮತ್ತು ಅವರ ಆಪ್ತ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ಪಾಲ್ಗೊಂಡು ಕಾರ್ಯಕ್ರಮಗಳಿಗೆ ಶುಭಾಶಯ ಕೋರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆತ್ತಡ್ಕ ಶಾಲೆಯಲ್ಲಿ ಘಟಕದ ಅಧ್ಯಕ್ಷ ಡಾ. ಶೋಭಾ ಪಿ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳಾದ ಶಿಬರಾಜೆ ಪಾದೆ ಬಸ್ಸು ತಂಗುದಾಣದ ನಾಮಫಲಕ ಅನಾವರಣ, ಶಿಬರಾಜೆ ಪಾದೆ ಅಂಗನವಾಡಿ ಕೇಂದ್ರಕ್ಕೆ ಕುಕ್ಕರ್ ಮತ್ತು ಕುರ್ಚಿಗಳ ಹಸ್ತಾಂತರ, ಶಾಲೆತ್ತಡ್ಕ ಶಾಲೆಗೆ ಹೊಸ ಪೋಡಿಯಂ ಹಸ್ತಾಂತರ, ಒಂದನೇ ತರಗತಿಯ ಮಕ್ಕಳಿಗೆ ಸ್ಥಿರ ಠೇವಣಿ ಪ್ರಮಾಣಪತ್ರ ವಿತರಣೆ, ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯ ವಿಜೇತರಿಗೆ ಹಾಗೂ ಭಾಗವಹಿಸಿದವರಿಗೆ ಪ್ರಮಾಣಪತ್ರ ಹಾಗೂ ಪದಕ ವಿತರಣೆ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ, ಶ್ರೀಧರ್ ರಾವ್, ಪಿ.ಟಿ. ಸಬಾಸ್ಟಿನ್ ಮತ್ತು ಚಿದಾನಂದ ಎಸ್. ಹೂಗಾರ್ ಇವರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭ ಸ್ಥಳೀಯ ಜೇಸಿಐ ಸದಸ್ಯರು, ಶಾಲಾ ಸಿಬ್ಬಂದಿ, ಪಾಲಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Related posts

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya
error: Content is protected !!