25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ, ಆ. 23 ರಂದು ನಡೆದ ವಿವಿಧ ಸಾಮಾಜಿಕ ಮತ್ತು ಶಿಕ್ಷಣಾತ್ಮಕ ಕಾರ್ಯಕ್ರಮಗಳಲ್ಲಿ ವಲಯ ಅಧ್ಯಕ್ಷ ಅಭಿಲಾಶ್ ಬಿ ಎ ಮತ್ತು ಅವರ ಆಪ್ತ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ಪಾಲ್ಗೊಂಡು ಕಾರ್ಯಕ್ರಮಗಳಿಗೆ ಶುಭಾಶಯ ಕೋರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆತ್ತಡ್ಕ ಶಾಲೆಯಲ್ಲಿ ಘಟಕದ ಅಧ್ಯಕ್ಷ ಡಾ. ಶೋಭಾ ಪಿ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳಾದ ಶಿಬರಾಜೆ ಪಾದೆ ಬಸ್ಸು ತಂಗುದಾಣದ ನಾಮಫಲಕ ಅನಾವರಣ, ಶಿಬರಾಜೆ ಪಾದೆ ಅಂಗನವಾಡಿ ಕೇಂದ್ರಕ್ಕೆ ಕುಕ್ಕರ್ ಮತ್ತು ಕುರ್ಚಿಗಳ ಹಸ್ತಾಂತರ, ಶಾಲೆತ್ತಡ್ಕ ಶಾಲೆಗೆ ಹೊಸ ಪೋಡಿಯಂ ಹಸ್ತಾಂತರ, ಒಂದನೇ ತರಗತಿಯ ಮಕ್ಕಳಿಗೆ ಸ್ಥಿರ ಠೇವಣಿ ಪ್ರಮಾಣಪತ್ರ ವಿತರಣೆ, ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯ ವಿಜೇತರಿಗೆ ಹಾಗೂ ಭಾಗವಹಿಸಿದವರಿಗೆ ಪ್ರಮಾಣಪತ್ರ ಹಾಗೂ ಪದಕ ವಿತರಣೆ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ, ಶ್ರೀಧರ್ ರಾವ್, ಪಿ.ಟಿ. ಸಬಾಸ್ಟಿನ್ ಮತ್ತು ಚಿದಾನಂದ ಎಸ್. ಹೂಗಾರ್ ಇವರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭ ಸ್ಥಳೀಯ ಜೇಸಿಐ ಸದಸ್ಯರು, ಶಾಲಾ ಸಿಬ್ಬಂದಿ, ಪಾಲಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Related posts

ಇಂದು(ಸೆ.2): ಶ್ರೀ ಕ್ಷೇತ್ರ ಓಡೀಲು ನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

Suddi Udaya

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya
error: Content is protected !!