ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ, ಆ. 23 ರಂದು ನಡೆದ ವಿವಿಧ ಸಾಮಾಜಿಕ ಮತ್ತು ಶಿಕ್ಷಣಾತ್ಮಕ ಕಾರ್ಯಕ್ರಮಗಳಲ್ಲಿ ವಲಯ ಅಧ್ಯಕ್ಷ ಅಭಿಲಾಶ್ ಬಿ ಎ ಮತ್ತು ಅವರ ಆಪ್ತ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ಪಾಲ್ಗೊಂಡು ಕಾರ್ಯಕ್ರಮಗಳಿಗೆ ಶುಭಾಶಯ ಕೋರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆತ್ತಡ್ಕ ಶಾಲೆಯಲ್ಲಿ ಘಟಕದ ಅಧ್ಯಕ್ಷ ಡಾ. ಶೋಭಾ ಪಿ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳಾದ ಶಿಬರಾಜೆ ಪಾದೆ ಬಸ್ಸು ತಂಗುದಾಣದ ನಾಮಫಲಕ ಅನಾವರಣ, ಶಿಬರಾಜೆ ಪಾದೆ ಅಂಗನವಾಡಿ ಕೇಂದ್ರಕ್ಕೆ ಕುಕ್ಕರ್ ಮತ್ತು ಕುರ್ಚಿಗಳ ಹಸ್ತಾಂತರ, ಶಾಲೆತ್ತಡ್ಕ ಶಾಲೆಗೆ ಹೊಸ ಪೋಡಿಯಂ ಹಸ್ತಾಂತರ, ಒಂದನೇ ತರಗತಿಯ ಮಕ್ಕಳಿಗೆ ಸ್ಥಿರ ಠೇವಣಿ ಪ್ರಮಾಣಪತ್ರ ವಿತರಣೆ, ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯ ವಿಜೇತರಿಗೆ ಹಾಗೂ ಭಾಗವಹಿಸಿದವರಿಗೆ ಪ್ರಮಾಣಪತ್ರ ಹಾಗೂ ಪದಕ ವಿತರಣೆ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ, ಶ್ರೀಧರ್ ರಾವ್, ಪಿ.ಟಿ. ಸಬಾಸ್ಟಿನ್ ಮತ್ತು ಚಿದಾನಂದ ಎಸ್. ಹೂಗಾರ್ ಇವರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭ ಸ್ಥಳೀಯ ಜೇಸಿಐ ಸದಸ್ಯರು, ಶಾಲಾ ಸಿಬ್ಬಂದಿ, ಪಾಲಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Related posts

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya
error: Content is protected !!