25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ, ಆ. 23 ರಂದು ನಡೆದ ವಿವಿಧ ಸಾಮಾಜಿಕ ಮತ್ತು ಶಿಕ್ಷಣಾತ್ಮಕ ಕಾರ್ಯಕ್ರಮಗಳಲ್ಲಿ ವಲಯ ಅಧ್ಯಕ್ಷ ಅಭಿಲಾಶ್ ಬಿ ಎ ಮತ್ತು ಅವರ ಆಪ್ತ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ಪಾಲ್ಗೊಂಡು ಕಾರ್ಯಕ್ರಮಗಳಿಗೆ ಶುಭಾಶಯ ಕೋರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆತ್ತಡ್ಕ ಶಾಲೆಯಲ್ಲಿ ಘಟಕದ ಅಧ್ಯಕ್ಷ ಡಾ. ಶೋಭಾ ಪಿ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳಾದ ಶಿಬರಾಜೆ ಪಾದೆ ಬಸ್ಸು ತಂಗುದಾಣದ ನಾಮಫಲಕ ಅನಾವರಣ, ಶಿಬರಾಜೆ ಪಾದೆ ಅಂಗನವಾಡಿ ಕೇಂದ್ರಕ್ಕೆ ಕುಕ್ಕರ್ ಮತ್ತು ಕುರ್ಚಿಗಳ ಹಸ್ತಾಂತರ, ಶಾಲೆತ್ತಡ್ಕ ಶಾಲೆಗೆ ಹೊಸ ಪೋಡಿಯಂ ಹಸ್ತಾಂತರ, ಒಂದನೇ ತರಗತಿಯ ಮಕ್ಕಳಿಗೆ ಸ್ಥಿರ ಠೇವಣಿ ಪ್ರಮಾಣಪತ್ರ ವಿತರಣೆ, ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯ ವಿಜೇತರಿಗೆ ಹಾಗೂ ಭಾಗವಹಿಸಿದವರಿಗೆ ಪ್ರಮಾಣಪತ್ರ ಹಾಗೂ ಪದಕ ವಿತರಣೆ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ, ಶ್ರೀಧರ್ ರಾವ್, ಪಿ.ಟಿ. ಸಬಾಸ್ಟಿನ್ ಮತ್ತು ಚಿದಾನಂದ ಎಸ್. ಹೂಗಾರ್ ಇವರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭ ಸ್ಥಳೀಯ ಜೇಸಿಐ ಸದಸ್ಯರು, ಶಾಲಾ ಸಿಬ್ಬಂದಿ, ಪಾಲಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Related posts

ಬೆಳಾಲು ಗ್ರಾ.ಪಂ. ವತಿಯಿಂದ ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya
error: Content is protected !!