23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ಮಂಡಲದ ವತಿಯಿಂದ ಆ. 24ರಂದು ನಾರಾವಿ ಕಾಶಿಮಠ ಸಭಾಂಗಣದಲ್ಲಿ ಬಿಜೆಪಿ ನಾರಾವಿ ಮತ್ತು ಕುತ್ಲೂರು ಶಕ್ತಿಕೇಂದ್ರದ ವಿಶೇಷ ಅಭ್ಯಾಸವರ್ಗ ಯಶಸ್ವಿಯಾಗಿ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಂಡಲದ ಉಪಾಧ್ಯಕ್ಷ ಮೋಹನ್ ಅಂಡಿಂಜೆ, ಹಿರಿಯ ಕಾರ್ಯಕರ್ತರಾದ ರತ್ನಾಕರ ಭಟ್, ಚೆಲುವಯ್ಯ ಪೂಜಾರಿ ಮತ್ತು ಕಾಂತಪ್ಪ ಮೂಲ್ಯರವರು ದೀಪ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಗೈದು ಕಾರ್ಯಕ್ರಮ ಉದ್ಘಾಟಿಸಿದರು. ಸಂಘಟನಾ ಅವಧಿಯ ಸಂಪನ್ಮೂಲ ವ್ಯಕ್ತಿಗಳಾಗಿ ದ.ಕ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲ್ ಮತ್ತು ವೇಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಉಮೇಶ್ ನಡ್ತಿಕಲ್ಲು ಭಾಗವಹಿಸಿದ್ದರು.


ಅಭ್ಯಾಸವರ್ಗದ ಸಮಾರೋಪ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶ್ರಮಿಕ ಶಾಸಕ ಹರೀಶ್ ಪೂಂಜರವರು ಭಾಗವಹಿಸಿ ಕಾರ್ಯಕರ್ತ ಬಂಧುಗಳಿಗೆ ರಾಷ್ಟ್ರೀಯತೆ, ಹಿಂದುತ್ವ ಮತ್ತು ಪಕ್ಷ ಸಂಘಟನೆಯ ಬಗ್ಗೆ ವಿಶೇಷ ಮಾರ್ಗದರ್ಶನ ನೀಡಿದರು. ವೇದಿಕೆಯಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ ಮತ್ತು ಕೃಷಿ ಪತ್ತಿನ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ ಉಪಸ್ಥಿತರಿದ್ದರು.


ಅಭ್ಯಾಸವರ್ಗದಲ್ಲಿ ನಾರಾವಿ ಮತ್ತು ಕುತ್ಲೂರು ಶಕ್ತಿಕೇಂದ್ರ ಪ್ರಮುಖರಾದ ಪ್ರಕಾಶ್ ಆಚಾರ್ಯ, ರತ್ನಾಕರ ಬಡೆಕ್ಕಿಲ, ಮಂಡಲ ಸಾಮಾಜಿಕ ಜಾಲತಾಣ ಸಹ ಸಂಚಾಲಕ ರಂಜಿತ್ ಮರೋಡಿ, ನಾರಾವಿ ಮತ್ತು ಕುತ್ಲೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಮತ್ತು ನಿರ್ದೇಶಕರುಗಳು, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳು,ನಾರಾವಿ ಗ್ರಾಮ ಪಂಚಾಯತ್ ಸದಸ್ಯರುಗಳು,ಮಂಡಲ ಮತ್ತು ಮೋರ್ಚಾದ ಪದಾಧಿಕಾರಿಗಳು, ಬೂತ್ ಸಮಿತಿಯ ಪದಾಧಿಕಾರಿಗಳು, ಪ್ರಮುಖರು, ಹಿರಿಯರು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು. ಮುರಾರಿ ರಾವ್ ಹೊಳೆಹೊದ್ದು ಬಿಜೆಪಿ ಗೀತೆ ಹಾಡಿದರು. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಉದಯ್ ಹೆಗ್ಡೆ ಸ್ವಾಗತಿಸಿದರು. ಬಿಜೆಪಿ ಮಹಾಶಕ್ತಿ ಕೇಂದ್ರ ನಾರಾವಿಯ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!