25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ನೆರಿಯ ಗ್ರಾಮದ ಬಟ್ಟಾಯಿ ಪಾದೆ ನಿವಾಸಿ ಜಯಂತ ಶೆಣೈ ಮಗಳು ಶ್ವೇತಾ (24ವ) ಕಳೆದ 6 ವರ್ಷಗಳಿಂದ ಹಾಸಿಗೆ ಹಿಡಿದಿದ್ದಾರೆ. ಜಯಂತ ಶೆಣೈ ಬೈಲಂಗಡಿ ಅಂಚೆ ಇಲಾಖೆಯಲ್ಲಿ ಹಿರಿಯ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಆರಂಭದಲ್ಲಿ ಕುತ್ತಿಗೆಯಿಂದ ಕೆಳಭಾಗಕ್ಕೆ ಸ್ಪರ್ಶವಿಲ್ಲದ ಕಾರಣದಿಂದ ಶರೀರವೇ ಕೆಲಸ ಮಾಡದಂತಾಗಿತ್ತು. ಆ ಸಮಯದಲ್ಲಿ ಆಸ್ಪತ್ರೆಯ ವೆಚ್ಚ ಸುಮಾರು ರೂ.15ಲಕ್ಷ ದಾಟಿತ್ತು ಹಲವು ಸಂಘಟನೆಗಳು ಹಾಗೂ ದಾನಿಗಳ ಸಹಕಾರದಿಂದ ಚಿಕಿತ್ಸೆಗಾಗಿ ಹಣ ಸಂಗ್ರಹಿಸಿ ಅವಳ ಜೀವ ಉಳಿಸಲಾಗಿತ್ತು. ಆದರೆ ದುರದೃಷ್ಟವಶಾತ್, ಈಗ ಮತ್ತೆ ಕಾಯಿಲೆ ಉಲ್ಬಣಗೊಂಡಿದ್ದು ಸ್ಥಿತಿ ಗಂಭೀರವಾಗಿದೆ ಪ್ರಸ್ತುತ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈಗಾಗಲೇ 5ದಿನದ ವೆಚ್ಚ 3 ಲಕ್ಷ ರೂಪಾಯಿ ದಾಟಿರುತ್ತದೆ. ಮುಂದಿನ ಚಿಕಿತ್ಸೆಗಾಗಿ ಹೆಚ್ಚಿನ ಮೊತ್ತದ ಅವಶ್ಯಕತೆ ಇದೆ ಆದ್ದರಿಂದ ಸಾಧ್ಯವಾದಷ್ಟು ಸಹಾಯ ಮಾಡಿ ಎಂದು ಮನೆಯವರು ತಿಳಿಸಿರುತ್ತಾರೆ.

JAYANTHA SHENΟΥ 948098053
phone pay number: 9686594339
Name: SHWETHA
A/c number:5922500100415401
Ifsc code: KARB0000592
BRANCH: Neriya

Related posts

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹುಣ್ಸೆಕಟ್ಟೆ ಶಾಲೆಯ ಶೌಚಾಲಯ ಸ್ವಚ್ಛತೆ

Suddi Udaya

ನಾವೂರು ಜನಸ್ಪಂದನ ಸಭೆ: ಜೆಜೆಎಂ ಕಾಮಗಾರಿ ಸಮರ್ಪಕವಾಗಿಲ್ಲ , ಬೆಳೆ ವಿಮೆ ಜಮೆ ಕುರಿತು ಚರ್ಚೆ

Suddi Udaya
error: Content is protected !!