July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಇಳಂತಿಲ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಇಳಂತಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ನಾರ್ಣಪ್ಪ ಗೌಡ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ಉದ್ಘಾಟನಾ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು.

ಮಂಡಲ ಪ್ರಮುಖರಾದ ರಾಜೇಶ್ ಪೆರ್ಮುಡ, ಸುಧಾಕರ ಅಡ್ಯಾರ್, ಸುಧೀರ್ ಸುವರ್ಣ ರವರು ಬೈಠಕ್ ನೀಡಿದರು. ಈ ಸಂದರ್ಭದಲ್ಲಿ , ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ನಾವೂರು, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ ಬೆಳಾಲ್, ತಣ್ಣೀರುಪಂಥ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಜಯಾನಂದ ಕಲ್ಲಾಪು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರ್,ಇಳಂತಿಲ ಶಕ್ತಿ ಕೇಂದ್ರ ಅಧ್ಯಕ್ಷರಾದ ಸುರೇಶ್ ಬಣ್ಣೆಂಗಳ,ಇಳಂತಿಲ ಪಂಚಾಯತ್ ಮಾಜಿ ಅಧ್ಯಕ್ಷರಾದ ತಿಮ್ಮಪ್ಪ ಗೌಡ, ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
error: Content is protected !!