25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಯಂ ಪಾಲಿಟೆಕ್ನಿಕ್ – ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಜಿರೆ : ಎಸ್ ಡಿ ಯಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವೀರೇಂದ್ರ ಹೆಗ್ಗಡೆಯವರ ಆಶಯದಂತೆ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಬದ್ದತೆ ಮತ್ತು ಸಾಮಾಜಿಕ ಕಳಕಳಿ ಭಾವನೆಯನ್ನು ಜಾಗೃತಗೊಳಿಸುವ ಉದ್ದೇಶದಿಂದ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ , ರೋಟರಿ ಕ್ಲಬ್, ಬೆಳ್ತಂಗಡಿ ಇವರ ಜಂಟಿ ಸಹಭಾಗಿತ್ವದೊಂದಿಗೆ ಮಂಗಳೂರಿನ ರೆಡ್ ಕ್ರಾಸ್ ರಕ್ತನಿಧಿ ಘಟಕದಿಂದ ಆ.23 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.

ಶಿಬಿರವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಡಾ.ದಯಾಕರ್ ಉದ್ಘಾಟಿಸಿ ಶುಭಹಾರೈಸಿದರು, ರೆಡ್ ಕ್ರಾಸ್ ರಕ್ತನಿಧಿಯ ಅಧಿಕಾರಿ ಪ್ರವೀಣ್ ಕುಮಾರ್ ರಕ್ತದಾನದ ಮಹತ್ವವನ್ನು ವಿವರಿಸಿದರು. ಸ್ವಯಂ ಸೇವಕಿ ಸ್ವಸ್ತಿ ರಕ್ತದ ಗುಂಪುಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂತೋಷ್, ಎಸ್ ಡಿ ಯಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಯೋಗಾಲಯ ಅಧಿಕಾರಿ ಶಿತಿಕಂಠ ಭಟ್, ಎನ್ ಯಸ್ ಯಸ್ ಯೋಜನಾಧಿಕಾರಿ ಪ್ರಕಾಶ್ ಗೌಡ, ವೈ ಆರ್ ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ ಉಪಸ್ಥಿತರಿದ್ದರು. ಸ್ವಯಂ ಸೇವಕ ಹರ್ಷಿತ್ ಸ್ವಾಗತಿಸಿ, ದಿಲನ್ ವಂದಿಸಿದರು. ವಿದ್ಯಾರ್ಥಿ ಶ್ರೇಯಸ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಒಟ್ಟು 67 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related posts

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕರ: ಮುಗೇರಡ್ಕ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya
error: Content is protected !!