25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

ಬೆಳ್ತಂಗಡಿ; ಕರ್ನಾಟಕ ಮುಸ್ಲಿಂ ಜಮಾಅತ್ ಕೆಎಂಜೆ ಉಜಿರೆ ಸರ್ಕಲ್ ಸಮಿತಿ ವತಿಯಿಂದ ಎಸ್ಸೆಸ್ಸೆಫ್‌ ಉಜಿರೆ ಸೆಂಟರ್ ಹಾಗೂ ಎಸ್‌ವೈಎಸ್ ಉಜಿರೆ ಸರ್ಕಲ್ ಸಹಭಾಗಿತ್ವದಲ್ಲಿ ಉಜಿರೆ ಹಳೆಪೇಟೆ ಮದರಸ ಸಭಾಂಗಣದಲ್ಲಿ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ ಆ.23 ರಂದು ಜರುಗಿತು.

ಅಧ್ಯಕ್ಷತೆಯನ್ನು ಕೆಎಂಜೆ ಉಜಿರೆ ಸರ್ಕಲ್ ಅಧ್ಯಕ್ಷ ಹಾಜಿ ಹೈದರ್ ಮದನಿ ವಹಿಸಿದ್ದರು.
ಉದ್ಘಾಟನೆಯನ್ನು ಕೆಎಮ್‌ಜೆ ಬೆಳ್ತಂಗಡಿ ಝೋನ್ ಸಮಿತಿ ಅಧ್ಯಕ್ಷ ಎಸ್ ಎಂ ತಂಙಳ್ ನೆರವೇರಿಸಿದರು.
ಪ್ರಸ್ತಾವನೆಯನ್ನು ಉಜಿರೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಮುದರ್ರಿಸ್ ಯಾಸಿರ್ ಫಾಳಿಲಿ ಅಲ್ ಫುರ್ಕಾನಿ ನಡೆಸಿದರು. ಸ್ವಾತಂತ್ರ್ಯ ಸಂಗಮದ ಬಗ್ಗೆ ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಹಾಗೂ ಉಮರ್‌ಕುಂಞಿ ನಾಡ್ಜೆ ಉಪನ್ಯಾಸ ನೀಡಿದರು.

ಕೆಎಮ್‌ಜೆ ಉಜಿರೆ ಸರ್ಕಲ್ ಪ್ರಧಾನ ಕಾರ್ಯದರ್ಶಿ ಖಾಲಿದ್ ಮುಸ್ಲಿಯಾರ್ ಕುಂಟಿನಿ ಕಾರ್ಯಕ್ರಮ ಸಂಯೋಜಿಸಿದರ
ಈ ಸಂದರ್ಭದಲ್ಲಿ ಕೆಎಮ್‌ಜೆ ಉಪಾಧ್ಯಕ್ಷ ಮುಹ್ಯುದ್ದೀನ್ ಉಜಿರೆ, ಜಿಲ್ಲಾ ಸದಸ್ಯ ಇಬ್ರಾಹಿಂ ಕಕ್ಕಿಂಜೆ, ಕೋಶಾಧಿಕಾರಿ‌‌‌ ಹಂಝ ಮಾಚಾರ್, ದ‌ಅವಾ ಸೆಕ್ರೆಟರಿ ಹನೀಫ್ ಮುಸ್ಲಿಯಾರ್ ನಿಡಿಗಲ್, ಮೀಡಿಯಾ ಸೆಕ್ರೆಟರಿ ಅಬ್ದುರ್ರಝಾಕ್ ಫುರ್ಕಾನಿ ನಿಡಿಗಲ್, ಸಹಾಯ್ ಸೆಕ್ರೆಟರಿ ರಝಾಕ್ ಮಾಚಾರ್, ಪಬ್ಲಿಕ್ ರಿಲೇಶನ್ ಸೆಕ್ರೆಟರಿ ಹಮೀದ್ ಗಾಂಧಿನಗರ, ಆರ್ಗನೈಸೇಶನ್ ಸೆಕ್ರೆಟರಿ ಅಬೂಬಕ್ಕರ್ ಕಕ್ಕೇನ, ಉಪಾಧ್ಯಕ್ಷ ಹುಸೈನ್ ಮೊದಲಾದವರು ಉಪಸ್ಥಿತರಿದ್ದರು. ಸರ್ಕಲ್ ವ್ಯಾಪ್ತಿಯ ಸೆಂಟರ್ ಗಳ ಪದಾಧಿಕಾರಿಗಳು, ಸಮೂಹ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಮುಂದಿನ ಕಾರ್ಯಯೋಜನೆಗಳ ಸರ್ಕುಲರ್ ವಾಚಿಸಿ ನಿರ್ದೇಶನ ನೀಡಲಾಯಿತು.

Related posts

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಶಿಶಿಲ : ರಸ್ತೆಗೆ ಬಿದ್ದ ಮರ , ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya
error: Content is protected !!