23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

ಕೊಕ್ಕಡ: ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ ಆ. 24 ರಂದು ಯುವದಿನ ಆಚರಿಸಲಾಯಿತು.

ಯುವಜನರಲ್ಲಿ ಸ್ವಾವಲಂಬನೆಯನ್ನು ಬೆಳೆಸಲು ಸ್ವ ಉದ್ಯೋಗ ಮಾಹಿತಿ ತರಬೇತಿ ನೀಡಲಾಯಿತು. ಚರ್ಚಿನ ಧರ್ಮಗುರುಗಳಾದ ವಂ. ಅನಿಲ್ ಪ್ರಕಾಶ್ ಡಿ ಸಿಲ್ವ ಕಾರ್ಯಕ್ರಮ ಉದ್ಘಾಟಿಸಿದರು.
ಉಜಿರೆ ರುಡಸೆಟ್ ಸಂಸ್ಥೆಯ ಪ್ರಾಧ್ಯಾಪಕ ಅಬ್ರಹಾಂ ಜೇಮ್ಸ್ ಪಿ.ವಿ. ಅವರು ಸ್ವಾವಲಂಬನೆಯ ಜೀವನ ಸಾಗಿಸಲು ಅಗತ್ಯ ಇರುವ ವಿವಿಧ ಸ್ವ ಉದ್ಯೋಗದ ತರಬೇತಿ ನೀಡಿದರು.

ರಿತೇಶ್ ಯಂ. ಸ್ಟ್ರೆಲ್ಲ ಪ್ರಾಸ್ತಾವಿಕ ಭಾಷಣ ಮಾಡಿದರು. ವಿಕ್ಟರ್ ಸುವಾರಿಸ್ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು.
ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಲಿಯ ಉಪಾಧ್ಯಕ್ಷ ಪ್ರವೀಣ್ ನೋಯೆಲ್ ಮೊಂತೆರೋ, ಕಾರ್ಯದರ್ಶಿ ವೀಣಾ ಮಸ್ಕರೇನ್ಹಸ್, ಸರ್ವ ಆಯೋಗಗಳ ಸಂಚಾಲಕಿ ಶ್ರೀಮತಿ ವಿನಿಫ್ರೆಡ್ ಡಿ ಸೋಜ ಉಪಸ್ಥಿತರಿದ್ದರು.

ಯುವದಿನದ ಪ್ರಯುಕ್ತ ಶಿಬಿರಾರ್ಥಿ ಯುವಕ, ಯುವತಿಯರನ್ನು ಸನ್ಮಾನಿಸಲಾಯಿತು. ಜೆಸಿಂತಾ ಡಿ ಸೋಜಾ ಸ್ವಾಗತಿಸಿ, ಪ್ರೀತಿ ಮರಿಯಾ ವಂದಿಸಿದರು.

ಪ್ರಜ್ವಲ್ ಲೋಬೊ ಕಾರ್ಯಕ್ರಮ ನಿರೂಪಿಸಿದರು. ಮೌರಿಸ್ ಡಿ ಸೋಜಾ, ವಿನ್ಸೆಂಟ್ ಮಿನೇಜಸ್, ವಿನ್ಸೆಂಟ್ ಸುವಾರಿಸ್, ದೀಪ ವಿ, ವಂ. ಅಶೋಕ ಡಿ ಸೋಜಾ ಸಹರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya
error: Content is protected !!