24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

ಕೊಕ್ಕಡ: ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ ಆ. 24 ರಂದು ಯುವದಿನ ಆಚರಿಸಲಾಯಿತು.

ಯುವಜನರಲ್ಲಿ ಸ್ವಾವಲಂಬನೆಯನ್ನು ಬೆಳೆಸಲು ಸ್ವ ಉದ್ಯೋಗ ಮಾಹಿತಿ ತರಬೇತಿ ನೀಡಲಾಯಿತು. ಚರ್ಚಿನ ಧರ್ಮಗುರುಗಳಾದ ವಂ. ಅನಿಲ್ ಪ್ರಕಾಶ್ ಡಿ ಸಿಲ್ವ ಕಾರ್ಯಕ್ರಮ ಉದ್ಘಾಟಿಸಿದರು.
ಉಜಿರೆ ರುಡಸೆಟ್ ಸಂಸ್ಥೆಯ ಪ್ರಾಧ್ಯಾಪಕ ಅಬ್ರಹಾಂ ಜೇಮ್ಸ್ ಪಿ.ವಿ. ಅವರು ಸ್ವಾವಲಂಬನೆಯ ಜೀವನ ಸಾಗಿಸಲು ಅಗತ್ಯ ಇರುವ ವಿವಿಧ ಸ್ವ ಉದ್ಯೋಗದ ತರಬೇತಿ ನೀಡಿದರು.

ರಿತೇಶ್ ಯಂ. ಸ್ಟ್ರೆಲ್ಲ ಪ್ರಾಸ್ತಾವಿಕ ಭಾಷಣ ಮಾಡಿದರು. ವಿಕ್ಟರ್ ಸುವಾರಿಸ್ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು.
ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಲಿಯ ಉಪಾಧ್ಯಕ್ಷ ಪ್ರವೀಣ್ ನೋಯೆಲ್ ಮೊಂತೆರೋ, ಕಾರ್ಯದರ್ಶಿ ವೀಣಾ ಮಸ್ಕರೇನ್ಹಸ್, ಸರ್ವ ಆಯೋಗಗಳ ಸಂಚಾಲಕಿ ಶ್ರೀಮತಿ ವಿನಿಫ್ರೆಡ್ ಡಿ ಸೋಜ ಉಪಸ್ಥಿತರಿದ್ದರು.

ಯುವದಿನದ ಪ್ರಯುಕ್ತ ಶಿಬಿರಾರ್ಥಿ ಯುವಕ, ಯುವತಿಯರನ್ನು ಸನ್ಮಾನಿಸಲಾಯಿತು. ಜೆಸಿಂತಾ ಡಿ ಸೋಜಾ ಸ್ವಾಗತಿಸಿ, ಪ್ರೀತಿ ಮರಿಯಾ ವಂದಿಸಿದರು.

ಪ್ರಜ್ವಲ್ ಲೋಬೊ ಕಾರ್ಯಕ್ರಮ ನಿರೂಪಿಸಿದರು. ಮೌರಿಸ್ ಡಿ ಸೋಜಾ, ವಿನ್ಸೆಂಟ್ ಮಿನೇಜಸ್, ವಿನ್ಸೆಂಟ್ ಸುವಾರಿಸ್, ದೀಪ ವಿ, ವಂ. ಅಶೋಕ ಡಿ ಸೋಜಾ ಸಹರಿಸಿದರು.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya
error: Content is protected !!