25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

ಗುಂಡೂರಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯ ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಲಕ್ಷ್ಮಿ ನಾರಾಯಣ ಕಾರಂತ ಇವರ ಪೌರೋಹಿತ್ಯದಲ್ಲಿ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಿದ್ದಕಟ್ಟೆ ಗುಣಶ್ರೀ ಶಾಲೆಯ ಯೋಗ ಶಿಕ್ಷಕರಾದ ಶ್ರೀಮತಿ ಶಶಿಕಲಾ ರವರು ಸಂಸ್ಕೃತಿ, ಸಂಸ್ಕಾರ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಪೂಜಾರಿ ಯವರು ಯೋಜನೆಯಿಂದ ಅದ ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆ ಬಗ್ಗೆ ತಿಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು,

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷ ಸಂಗೀತ ,ಉಷಾ ಹಾಗೂ ಒಕ್ಕೂಟ ಅಧ್ಯಕ್ಷ ಸದಾನಂದ ಪೂಜಾರಿ, ಹಾಗೂ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಸೇಸಪ್ಪ ಪೂಜಾರಿ ಉಪಸ್ಥಿತರಿದ್ದರು.

ಸಮಿತಿ ಕಾರ್ಯದರ್ಶಿ ಸೌಜನ್ಯ ಜೈನ ವರದಿ ವಾಚಿಸಿದರು. ಒಕ್ಕೂಟ ಕಾರ್ಯದರ್ಶಿ ಪ್ರವೀಣ್ ಆಚಾರ್ಯ ಸ್ವಾಗತಿಸಿ, ಸೇವಾಪ್ರತಿನಿಧಿ ಹರೀಶ್ ಬಾಡರು ಧನ್ಯವಾದ ವಿತ್ತರು.

Related posts

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಎಲ್.ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ

Suddi Udaya

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!