25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಸಹಕಾರ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭ

ಮುಂಡಾಜೆ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭವು ಚಾರ್ಮಾಡಿ ಶಾಖಾ ಕಟ್ಟಡದ ಸಮೀಪದ ಪಂಚಶ್ರೀ ಸಭಾಭವನದಲ್ಲಿ ಆ.25 ರಂದು ನಡೆಯಿತು.

ಶಾಖೆಯ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭ ಕೋರಿದರು.

ಅಧ್ಯಕ್ಷತೆಯನ್ನು ಮುಂಡಾಜೆ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ಕೆ.ಪ್ರಕಾಶ್ ನಾರಾಯಣ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಚಾರ್ಮಾಡಿ ಗ್ರಾ.ಪಂ ಅಧ್ಯಕ್ಷೆ ಶಾರದಾ, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ, ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಮೂಲ್ಯ,ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಡಳಿತ ಮೊಕ್ತೇಸರಾದ ಪ್ರಕಾಶ್ ಹೊಸಮಠ, ಚಾರ್ಮಾಡಿಯ ಹಿರಿಯ ಸದಸ್ಯ ಅನಂತ ರಾವ್, ಕಾಂತಪ್ಪ ಗೌಡ ಅಡಿಮಾರು, ಮುಂಡಾಜೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಎಂ.ಶಶಿಧರ ಕಲ್ಮಂಜ, ರಾಘವ ಕಲ್ಮಂಜ, ಶಿವಪ್ರಸಾದ್ ಗೌಡ ದೇವಸ್ಯ, ರವಿ ಪೂಜಾರಿ, ಅಜಯ್ ಕೆ.ಎ, ಅಶ್ವಿನಿ ಎ.ಹೆಬ್ಬಾರ್, ಸುಮಾ ಎಂ ಗೋಖಲೆ, ಮೋಹಿನಿ, ನಾರಾಯಣ ಪಡ್ಕೆ , ಬಾಬು ಗೌಡ, ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಪರಾಂಜಪೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಆನೆ ಹಾವಳಿಯಿಂದ ತೊದರೆಗೊಳಗಾದ ಕುಟುಂಬಗಳಿಗೆ ಪರಿಹಾರ ಮೊತ್ತ ಹಸ್ತಾಂತರಿಸಲಾಯಿತು.

ಸಂಘದ ನಿರ್ದೇಶಕ ವೆಂಕಟೇಶ್ವರ ಭಟ್ ಕಜೆ ಸ್ವಾಗತಿಸಿ, ನಿರ್ದೇಶಕ ಚೆನ್ನಕೇಶವ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.ಉಪಾಧ್ಯಕ್ಷ ರಾಘವ ಗೌಡ ಕುಡುಮಡ್ಕ ವಂದಿಸಿದರು.

Related posts

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಶ್ರೀ ಧ.ಮಂ.ಪ.ಪೂ. ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕ ಮನೋಹರ ಶೆಟ್ಟಿಯವರಿಗೆ ಸನ್ಮಾನ

Suddi Udaya
error: Content is protected !!