30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

ಕೊಕ್ಕಡ: ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ ಆ. 24 ರಂದು ಯುವದಿನ ಆಚರಿಸಲಾಯಿತು.

ಯುವಜನರಲ್ಲಿ ಸ್ವಾವಲಂಬನೆಯನ್ನು ಬೆಳೆಸಲು ಸ್ವ ಉದ್ಯೋಗ ಮಾಹಿತಿ ತರಬೇತಿ ನೀಡಲಾಯಿತು. ಚರ್ಚಿನ ಧರ್ಮಗುರುಗಳಾದ ವಂ. ಅನಿಲ್ ಪ್ರಕಾಶ್ ಡಿ ಸಿಲ್ವ ಕಾರ್ಯಕ್ರಮ ಉದ್ಘಾಟಿಸಿದರು.
ಉಜಿರೆ ರುಡಸೆಟ್ ಸಂಸ್ಥೆಯ ಪ್ರಾಧ್ಯಾಪಕ ಅಬ್ರಹಾಂ ಜೇಮ್ಸ್ ಪಿ.ವಿ. ಅವರು ಸ್ವಾವಲಂಬನೆಯ ಜೀವನ ಸಾಗಿಸಲು ಅಗತ್ಯ ಇರುವ ವಿವಿಧ ಸ್ವ ಉದ್ಯೋಗದ ತರಬೇತಿ ನೀಡಿದರು.

ರಿತೇಶ್ ಯಂ. ಸ್ಟ್ರೆಲ್ಲ ಪ್ರಾಸ್ತಾವಿಕ ಭಾಷಣ ಮಾಡಿದರು. ವಿಕ್ಟರ್ ಸುವಾರಿಸ್ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು.
ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಲಿಯ ಉಪಾಧ್ಯಕ್ಷ ಪ್ರವೀಣ್ ನೋಯೆಲ್ ಮೊಂತೆರೋ, ಕಾರ್ಯದರ್ಶಿ ವೀಣಾ ಮಸ್ಕರೇನ್ಹಸ್, ಸರ್ವ ಆಯೋಗಗಳ ಸಂಚಾಲಕಿ ಶ್ರೀಮತಿ ವಿನಿಫ್ರೆಡ್ ಡಿ ಸೋಜ ಉಪಸ್ಥಿತರಿದ್ದರು.

ಯುವದಿನದ ಪ್ರಯುಕ್ತ ಶಿಬಿರಾರ್ಥಿ ಯುವಕ, ಯುವತಿಯರನ್ನು ಸನ್ಮಾನಿಸಲಾಯಿತು. ಜೆಸಿಂತಾ ಡಿ ಸೋಜಾ ಸ್ವಾಗತಿಸಿ, ಪ್ರೀತಿ ಮರಿಯಾ ವಂದಿಸಿದರು.

ಪ್ರಜ್ವಲ್ ಲೋಬೊ ಕಾರ್ಯಕ್ರಮ ನಿರೂಪಿಸಿದರು. ಮೌರಿಸ್ ಡಿ ಸೋಜಾ, ವಿನ್ಸೆಂಟ್ ಮಿನೇಜಸ್, ವಿನ್ಸೆಂಟ್ ಸುವಾರಿಸ್, ದೀಪ ವಿ, ವಂ. ಅಶೋಕ ಡಿ ಸೋಜಾ ಸಹರಿಸಿದರು.

Related posts

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಮೇ 1-3 : ಕುಂಡದಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ನಲ್ಲಿ 51 ನೇ ವರ್ಷದ ಮಖಾಂ ಉರೂಸ್

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya
error: Content is protected !!