26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

ಕೊಕ್ಕಡ: ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ ಆ. 24 ರಂದು ಯುವದಿನ ಆಚರಿಸಲಾಯಿತು.

ಯುವಜನರಲ್ಲಿ ಸ್ವಾವಲಂಬನೆಯನ್ನು ಬೆಳೆಸಲು ಸ್ವ ಉದ್ಯೋಗ ಮಾಹಿತಿ ತರಬೇತಿ ನೀಡಲಾಯಿತು. ಚರ್ಚಿನ ಧರ್ಮಗುರುಗಳಾದ ವಂ. ಅನಿಲ್ ಪ್ರಕಾಶ್ ಡಿ ಸಿಲ್ವ ಕಾರ್ಯಕ್ರಮ ಉದ್ಘಾಟಿಸಿದರು.
ಉಜಿರೆ ರುಡಸೆಟ್ ಸಂಸ್ಥೆಯ ಪ್ರಾಧ್ಯಾಪಕ ಅಬ್ರಹಾಂ ಜೇಮ್ಸ್ ಪಿ.ವಿ. ಅವರು ಸ್ವಾವಲಂಬನೆಯ ಜೀವನ ಸಾಗಿಸಲು ಅಗತ್ಯ ಇರುವ ವಿವಿಧ ಸ್ವ ಉದ್ಯೋಗದ ತರಬೇತಿ ನೀಡಿದರು.

ರಿತೇಶ್ ಯಂ. ಸ್ಟ್ರೆಲ್ಲ ಪ್ರಾಸ್ತಾವಿಕ ಭಾಷಣ ಮಾಡಿದರು. ವಿಕ್ಟರ್ ಸುವಾರಿಸ್ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು.
ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಲಿಯ ಉಪಾಧ್ಯಕ್ಷ ಪ್ರವೀಣ್ ನೋಯೆಲ್ ಮೊಂತೆರೋ, ಕಾರ್ಯದರ್ಶಿ ವೀಣಾ ಮಸ್ಕರೇನ್ಹಸ್, ಸರ್ವ ಆಯೋಗಗಳ ಸಂಚಾಲಕಿ ಶ್ರೀಮತಿ ವಿನಿಫ್ರೆಡ್ ಡಿ ಸೋಜ ಉಪಸ್ಥಿತರಿದ್ದರು.

ಯುವದಿನದ ಪ್ರಯುಕ್ತ ಶಿಬಿರಾರ್ಥಿ ಯುವಕ, ಯುವತಿಯರನ್ನು ಸನ್ಮಾನಿಸಲಾಯಿತು. ಜೆಸಿಂತಾ ಡಿ ಸೋಜಾ ಸ್ವಾಗತಿಸಿ, ಪ್ರೀತಿ ಮರಿಯಾ ವಂದಿಸಿದರು.

ಪ್ರಜ್ವಲ್ ಲೋಬೊ ಕಾರ್ಯಕ್ರಮ ನಿರೂಪಿಸಿದರು. ಮೌರಿಸ್ ಡಿ ಸೋಜಾ, ವಿನ್ಸೆಂಟ್ ಮಿನೇಜಸ್, ವಿನ್ಸೆಂಟ್ ಸುವಾರಿಸ್, ದೀಪ ವಿ, ವಂ. ಅಶೋಕ ಡಿ ಸೋಜಾ ಸಹರಿಸಿದರು.

Related posts

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya
error: Content is protected !!