25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ, ಆ. 23 ರಂದು ನಡೆದ ವಿವಿಧ ಸಾಮಾಜಿಕ ಮತ್ತು ಶಿಕ್ಷಣಾತ್ಮಕ ಕಾರ್ಯಕ್ರಮಗಳಲ್ಲಿ ವಲಯ ಅಧ್ಯಕ್ಷ ಅಭಿಲಾಶ್ ಬಿ ಎ ಮತ್ತು ಅವರ ಆಪ್ತ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ಪಾಲ್ಗೊಂಡು ಕಾರ್ಯಕ್ರಮಗಳಿಗೆ ಶುಭಾಶಯ ಕೋರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆತ್ತಡ್ಕ ಶಾಲೆಯಲ್ಲಿ ಘಟಕದ ಅಧ್ಯಕ್ಷ ಡಾ. ಶೋಭಾ ಪಿ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳಾದ ಶಿಬರಾಜೆ ಪಾದೆ ಬಸ್ಸು ತಂಗುದಾಣದ ನಾಮಫಲಕ ಅನಾವರಣ, ಶಿಬರಾಜೆ ಪಾದೆ ಅಂಗನವಾಡಿ ಕೇಂದ್ರಕ್ಕೆ ಕುಕ್ಕರ್ ಮತ್ತು ಕುರ್ಚಿಗಳ ಹಸ್ತಾಂತರ, ಶಾಲೆತ್ತಡ್ಕ ಶಾಲೆಗೆ ಹೊಸ ಪೋಡಿಯಂ ಹಸ್ತಾಂತರ, ಒಂದನೇ ತರಗತಿಯ ಮಕ್ಕಳಿಗೆ ಸ್ಥಿರ ಠೇವಣಿ ಪ್ರಮಾಣಪತ್ರ ವಿತರಣೆ, ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯ ವಿಜೇತರಿಗೆ ಹಾಗೂ ಭಾಗವಹಿಸಿದವರಿಗೆ ಪ್ರಮಾಣಪತ್ರ ಹಾಗೂ ಪದಕ ವಿತರಣೆ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ, ಶ್ರೀಧರ್ ರಾವ್, ಪಿ.ಟಿ. ಸಬಾಸ್ಟಿನ್ ಮತ್ತು ಚಿದಾನಂದ ಎಸ್. ಹೂಗಾರ್ ಇವರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭ ಸ್ಥಳೀಯ ಜೇಸಿಐ ಸದಸ್ಯರು, ಶಾಲಾ ಸಿಬ್ಬಂದಿ, ಪಾಲಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Related posts

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ: ‘ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026’

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!