ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ, ಆ. 23 ರಂದು ನಡೆದ ವಿವಿಧ ಸಾಮಾಜಿಕ ಮತ್ತು ಶಿಕ್ಷಣಾತ್ಮಕ ಕಾರ್ಯಕ್ರಮಗಳಲ್ಲಿ ವಲಯ ಅಧ್ಯಕ್ಷ ಅಭಿಲಾಶ್ ಬಿ ಎ ಮತ್ತು ಅವರ ಆಪ್ತ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ಪಾಲ್ಗೊಂಡು ಕಾರ್ಯಕ್ರಮಗಳಿಗೆ ಶುಭಾಶಯ ಕೋರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆತ್ತಡ್ಕ ಶಾಲೆಯಲ್ಲಿ ಘಟಕದ ಅಧ್ಯಕ್ಷ ಡಾ. ಶೋಭಾ ಪಿ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳಾದ ಶಿಬರಾಜೆ ಪಾದೆ ಬಸ್ಸು ತಂಗುದಾಣದ ನಾಮಫಲಕ ಅನಾವರಣ, ಶಿಬರಾಜೆ ಪಾದೆ ಅಂಗನವಾಡಿ ಕೇಂದ್ರಕ್ಕೆ ಕುಕ್ಕರ್ ಮತ್ತು ಕುರ್ಚಿಗಳ ಹಸ್ತಾಂತರ, ಶಾಲೆತ್ತಡ್ಕ ಶಾಲೆಗೆ ಹೊಸ ಪೋಡಿಯಂ ಹಸ್ತಾಂತರ, ಒಂದನೇ ತರಗತಿಯ ಮಕ್ಕಳಿಗೆ ಸ್ಥಿರ ಠೇವಣಿ ಪ್ರಮಾಣಪತ್ರ ವಿತರಣೆ, ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯ ವಿಜೇತರಿಗೆ ಹಾಗೂ ಭಾಗವಹಿಸಿದವರಿಗೆ ಪ್ರಮಾಣಪತ್ರ ಹಾಗೂ ಪದಕ ವಿತರಣೆ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ, ಶ್ರೀಧರ್ ರಾವ್, ಪಿ.ಟಿ. ಸಬಾಸ್ಟಿನ್ ಮತ್ತು ಚಿದಾನಂದ ಎಸ್. ಹೂಗಾರ್ ಇವರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭ ಸ್ಥಳೀಯ ಜೇಸಿಐ ಸದಸ್ಯರು, ಶಾಲಾ ಸಿಬ್ಬಂದಿ, ಪಾಲಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Related posts

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!