July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ, ಆ. 23 ರಂದು ನಡೆದ ವಿವಿಧ ಸಾಮಾಜಿಕ ಮತ್ತು ಶಿಕ್ಷಣಾತ್ಮಕ ಕಾರ್ಯಕ್ರಮಗಳಲ್ಲಿ ವಲಯ ಅಧ್ಯಕ್ಷ ಅಭಿಲಾಶ್ ಬಿ ಎ ಮತ್ತು ಅವರ ಆಪ್ತ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ಪಾಲ್ಗೊಂಡು ಕಾರ್ಯಕ್ರಮಗಳಿಗೆ ಶುಭಾಶಯ ಕೋರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆತ್ತಡ್ಕ ಶಾಲೆಯಲ್ಲಿ ಘಟಕದ ಅಧ್ಯಕ್ಷ ಡಾ. ಶೋಭಾ ಪಿ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳಾದ ಶಿಬರಾಜೆ ಪಾದೆ ಬಸ್ಸು ತಂಗುದಾಣದ ನಾಮಫಲಕ ಅನಾವರಣ, ಶಿಬರಾಜೆ ಪಾದೆ ಅಂಗನವಾಡಿ ಕೇಂದ್ರಕ್ಕೆ ಕುಕ್ಕರ್ ಮತ್ತು ಕುರ್ಚಿಗಳ ಹಸ್ತಾಂತರ, ಶಾಲೆತ್ತಡ್ಕ ಶಾಲೆಗೆ ಹೊಸ ಪೋಡಿಯಂ ಹಸ್ತಾಂತರ, ಒಂದನೇ ತರಗತಿಯ ಮಕ್ಕಳಿಗೆ ಸ್ಥಿರ ಠೇವಣಿ ಪ್ರಮಾಣಪತ್ರ ವಿತರಣೆ, ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯ ವಿಜೇತರಿಗೆ ಹಾಗೂ ಭಾಗವಹಿಸಿದವರಿಗೆ ಪ್ರಮಾಣಪತ್ರ ಹಾಗೂ ಪದಕ ವಿತರಣೆ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ, ಶ್ರೀಧರ್ ರಾವ್, ಪಿ.ಟಿ. ಸಬಾಸ್ಟಿನ್ ಮತ್ತು ಚಿದಾನಂದ ಎಸ್. ಹೂಗಾರ್ ಇವರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭ ಸ್ಥಳೀಯ ಜೇಸಿಐ ಸದಸ್ಯರು, ಶಾಲಾ ಸಿಬ್ಬಂದಿ, ಪಾಲಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Related posts

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

Suddi Udaya

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya
error: Content is protected !!