32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಸಹಕಾರ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭ

ಮುಂಡಾಜೆ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭವು ಚಾರ್ಮಾಡಿ ಶಾಖಾ ಕಟ್ಟಡದ ಸಮೀಪದ ಪಂಚಶ್ರೀ ಸಭಾಭವನದಲ್ಲಿ ಆ.25 ರಂದು ನಡೆಯಿತು.

ಶಾಖೆಯ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭ ಕೋರಿದರು.

ಅಧ್ಯಕ್ಷತೆಯನ್ನು ಮುಂಡಾಜೆ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ಕೆ.ಪ್ರಕಾಶ್ ನಾರಾಯಣ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಚಾರ್ಮಾಡಿ ಗ್ರಾ.ಪಂ ಅಧ್ಯಕ್ಷೆ ಶಾರದಾ, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ, ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಮೂಲ್ಯ,ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಡಳಿತ ಮೊಕ್ತೇಸರಾದ ಪ್ರಕಾಶ್ ಹೊಸಮಠ, ಚಾರ್ಮಾಡಿಯ ಹಿರಿಯ ಸದಸ್ಯ ಅನಂತ ರಾವ್, ಕಾಂತಪ್ಪ ಗೌಡ ಅಡಿಮಾರು, ಮುಂಡಾಜೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಎಂ.ಶಶಿಧರ ಕಲ್ಮಂಜ, ರಾಘವ ಕಲ್ಮಂಜ, ಶಿವಪ್ರಸಾದ್ ಗೌಡ ದೇವಸ್ಯ, ರವಿ ಪೂಜಾರಿ, ಅಜಯ್ ಕೆ.ಎ, ಅಶ್ವಿನಿ ಎ.ಹೆಬ್ಬಾರ್, ಸುಮಾ ಎಂ ಗೋಖಲೆ, ಮೋಹಿನಿ, ನಾರಾಯಣ ಪಡ್ಕೆ , ಬಾಬು ಗೌಡ, ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಪರಾಂಜಪೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಆನೆ ಹಾವಳಿಯಿಂದ ತೊದರೆಗೊಳಗಾದ ಕುಟುಂಬಗಳಿಗೆ ಪರಿಹಾರ ಮೊತ್ತ ಹಸ್ತಾಂತರಿಸಲಾಯಿತು.

ಸಂಘದ ನಿರ್ದೇಶಕ ವೆಂಕಟೇಶ್ವರ ಭಟ್ ಕಜೆ ಸ್ವಾಗತಿಸಿ, ನಿರ್ದೇಶಕ ಚೆನ್ನಕೇಶವ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.ಉಪಾಧ್ಯಕ್ಷ ರಾಘವ ಗೌಡ ಕುಡುಮಡ್ಕ ವಂದಿಸಿದರು.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Suddi Udaya
error: Content is protected !!