25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಸಹಕಾರ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭ

ಮುಂಡಾಜೆ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭವು ಚಾರ್ಮಾಡಿ ಶಾಖಾ ಕಟ್ಟಡದ ಸಮೀಪದ ಪಂಚಶ್ರೀ ಸಭಾಭವನದಲ್ಲಿ ಆ.25 ರಂದು ನಡೆಯಿತು.

ಶಾಖೆಯ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭ ಕೋರಿದರು.

ಅಧ್ಯಕ್ಷತೆಯನ್ನು ಮುಂಡಾಜೆ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ಕೆ.ಪ್ರಕಾಶ್ ನಾರಾಯಣ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಚಾರ್ಮಾಡಿ ಗ್ರಾ.ಪಂ ಅಧ್ಯಕ್ಷೆ ಶಾರದಾ, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ, ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಮೂಲ್ಯ,ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಡಳಿತ ಮೊಕ್ತೇಸರಾದ ಪ್ರಕಾಶ್ ಹೊಸಮಠ, ಚಾರ್ಮಾಡಿಯ ಹಿರಿಯ ಸದಸ್ಯ ಅನಂತ ರಾವ್, ಕಾಂತಪ್ಪ ಗೌಡ ಅಡಿಮಾರು, ಮುಂಡಾಜೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಎಂ.ಶಶಿಧರ ಕಲ್ಮಂಜ, ರಾಘವ ಕಲ್ಮಂಜ, ಶಿವಪ್ರಸಾದ್ ಗೌಡ ದೇವಸ್ಯ, ರವಿ ಪೂಜಾರಿ, ಅಜಯ್ ಕೆ.ಎ, ಅಶ್ವಿನಿ ಎ.ಹೆಬ್ಬಾರ್, ಸುಮಾ ಎಂ ಗೋಖಲೆ, ಮೋಹಿನಿ, ನಾರಾಯಣ ಪಡ್ಕೆ , ಬಾಬು ಗೌಡ, ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಪರಾಂಜಪೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಆನೆ ಹಾವಳಿಯಿಂದ ತೊದರೆಗೊಳಗಾದ ಕುಟುಂಬಗಳಿಗೆ ಪರಿಹಾರ ಮೊತ್ತ ಹಸ್ತಾಂತರಿಸಲಾಯಿತು.

ಸಂಘದ ನಿರ್ದೇಶಕ ವೆಂಕಟೇಶ್ವರ ಭಟ್ ಕಜೆ ಸ್ವಾಗತಿಸಿ, ನಿರ್ದೇಶಕ ಚೆನ್ನಕೇಶವ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.ಉಪಾಧ್ಯಕ್ಷ ರಾಘವ ಗೌಡ ಕುಡುಮಡ್ಕ ವಂದಿಸಿದರು.

Related posts

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ಕಲ್ಮಂಜ: ಬೂತ್ 89ರ ಪಂ. ಮಾಜಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!