September 6, 2026
ತಾಲೂಕು ಸುದ್ದಿ

ಅಕ್ರಮ ಪ್ರವೇಶ ಮಾಡಿ ಯುವಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ

ಬೆಳ್ತಂಗಡಿ: ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ವಿಚಾರದಲ್ಲಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಬಳಿಕ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯಲ್ಲಿರುವ ಪ್ರಜ್ಞಾ ಹೇರ್ ಡ್ರೇಸ್ಸಸ್ ನಲ್ಲಿ ಕೆಲಸ ಮಾಡುತ್ತಿದ್ದ ಕೊಕ್ಕಡ ಗ್ರಾಮದ ಕೋರುಗದ್ದೆ ನಿವಾಸಿ ರಜತ್ ಭಂಡಾರಿ(25) ಎಂಬಾತ ಆ.25 ರಂದು ಬೆಳಗ್ಗೆ 9:50 ರ ಸಮಯದಲ್ಲಿರುವ ಅಂಗಡಿಗೆ ಕಿರಣ್ ಶಿಶಿಲ ಎಂಬಾತ KA-21-M-5560 ಎಂಬ ಕಾರಿನಲ್ಲಿ ಬಂದು ರಜತ್ ಎಂಬಾತನಲ್ಲಿ ಹೊರಗೆ ಬಾ ನಿನ್ನ ಜೊತೆ ಮಾತನಾಡಲಿ ಇದೆ ಎಂದು ಕರೆದಾಗ ಹೊರಗೆ ಬಾರದ ರಜತ್ ನನ್ನು ಅಂಗಡಿ ಒಳಗೆ ಅಕ್ರಮ ಪ್ರವೇಶಿಸಿ ರಜತ್ ಶಾರ್ಟ್ ನ ಕಾಲರ್ ಹಿಡಿದು ಅಂಗಡಿ ಹೊರಗೆ ಎಳೆದುಕೊಂಡು ಬಂದು ಅವ್ಯಾಚ ಶಬ್ದಗಳಿಂದ ಬೈದು ಧರ್ಮಸ್ಥಳದ ಪರ ಸ್ಟೇಟಸ್ ಹಾಕ್ತೀಯ ಎಂದು ಬೈದು ಎದೆಗೆ ,ಎಡಕೆನ್ನೆಗೆ ಕೈಯಿಂದ ಹೊಡೆದು ಕಾಲಿನಿಂದ ಮರ್ಮಾಂಗಕ್ಕೆ ಒದ್ದು ನೀನು ನನ್ನ ಮೇಲೆ ಪೊಲೀಸ್ ಠಾಣೆಗೆ ದೂರು ನೀಡಿದರೆ ನಿನ್ನನ್ನ ಚಾಕುವಿನಿಂದ ಕೊಲ್ಲುವುದಾಗಿ ಆರೋಪಿ ಕಿರಣ್ ಶಿಶಿಲ ಜೀವಬೆದರಿಕೆ ಹಾಕಿರುವುದಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲ್ಲೆಗೊಳಗಾದ ರಜತ್ ಭಂಡಾರಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಆ.25 ರಂದು ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.

ಕಿರಣ್ ಶಿಶಿಲನಿಂದ ಹಲ್ಲೆಗೊಳಗಾದ ರಜತ್ ಭಂಡಾರಿ ನೀಡಿದ ದೂರಿನ ಮೇರೆಗೆ ಆ.25 ರಂದು ಸಂಜೆ ಕಲಂ 329(4),352,115(2),351(2),110- BNS-2023 ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ಕಿರಣ್ ಶಿಶಿಲ ವಿರುದ್ಧ ಪ್ರಕರಣ ದಾಖಲಾಗಿದೆ.

Related posts

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನಾಗಬನದಲ್ಲಿ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ಕೊಯ್ಯೂರಿನಲ್ಲಿ ಕ.ಸಾ.ಪ ತಾಲೂಕು ಸಮ್ಮೇಳನ; ಡಾ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!