25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಅಕ್ರಮ ಪ್ರವೇಶ ಮಾಡಿ ಯುವಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ

ಬೆಳ್ತಂಗಡಿ: ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ವಿಚಾರದಲ್ಲಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಬಳಿಕ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯಲ್ಲಿರುವ ಪ್ರಜ್ಞಾ ಹೇರ್ ಡ್ರೇಸ್ಸಸ್ ನಲ್ಲಿ ಕೆಲಸ ಮಾಡುತ್ತಿದ್ದ ಕೊಕ್ಕಡ ಗ್ರಾಮದ ಕೋರುಗದ್ದೆ ನಿವಾಸಿ ರಜತ್ ಭಂಡಾರಿ(25) ಎಂಬಾತ ಆ.25 ರಂದು ಬೆಳಗ್ಗೆ 9:50 ರ ಸಮಯದಲ್ಲಿರುವ ಅಂಗಡಿಗೆ ಕಿರಣ್ ಶಿಶಿಲ ಎಂಬಾತ KA-21-M-5560 ಎಂಬ ಕಾರಿನಲ್ಲಿ ಬಂದು ರಜತ್ ಎಂಬಾತನಲ್ಲಿ ಹೊರಗೆ ಬಾ ನಿನ್ನ ಜೊತೆ ಮಾತನಾಡಲಿ ಇದೆ ಎಂದು ಕರೆದಾಗ ಹೊರಗೆ ಬಾರದ ರಜತ್ ನನ್ನು ಅಂಗಡಿ ಒಳಗೆ ಅಕ್ರಮ ಪ್ರವೇಶಿಸಿ ರಜತ್ ಶಾರ್ಟ್ ನ ಕಾಲರ್ ಹಿಡಿದು ಅಂಗಡಿ ಹೊರಗೆ ಎಳೆದುಕೊಂಡು ಬಂದು ಅವ್ಯಾಚ ಶಬ್ದಗಳಿಂದ ಬೈದು ಧರ್ಮಸ್ಥಳದ ಪರ ಸ್ಟೇಟಸ್ ಹಾಕ್ತೀಯ ಎಂದು ಬೈದು ಎದೆಗೆ ,ಎಡಕೆನ್ನೆಗೆ ಕೈಯಿಂದ ಹೊಡೆದು ಕಾಲಿನಿಂದ ಮರ್ಮಾಂಗಕ್ಕೆ ಒದ್ದು ನೀನು ನನ್ನ ಮೇಲೆ ಪೊಲೀಸ್ ಠಾಣೆಗೆ ದೂರು ನೀಡಿದರೆ ನಿನ್ನನ್ನ ಚಾಕುವಿನಿಂದ ಕೊಲ್ಲುವುದಾಗಿ ಆರೋಪಿ ಕಿರಣ್ ಶಿಶಿಲ ಜೀವಬೆದರಿಕೆ ಹಾಕಿರುವುದಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲ್ಲೆಗೊಳಗಾದ ರಜತ್ ಭಂಡಾರಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಆ.25 ರಂದು ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.

ಕಿರಣ್ ಶಿಶಿಲನಿಂದ ಹಲ್ಲೆಗೊಳಗಾದ ರಜತ್ ಭಂಡಾರಿ ನೀಡಿದ ದೂರಿನ ಮೇರೆಗೆ ಆ.25 ರಂದು ಸಂಜೆ ಕಲಂ 329(4),352,115(2),351(2),110- BNS-2023 ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ಕಿರಣ್ ಶಿಶಿಲ ವಿರುದ್ಧ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya
error: Content is protected !!