September 6, 2026
ತಾಲೂಕು ಸುದ್ದಿ

ಅಕ್ರಮ ಪ್ರವೇಶ ಮಾಡಿ ಯುವಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ

ಬೆಳ್ತಂಗಡಿ: ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ವಿಚಾರದಲ್ಲಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಬಳಿಕ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯಲ್ಲಿರುವ ಪ್ರಜ್ಞಾ ಹೇರ್ ಡ್ರೇಸ್ಸಸ್ ನಲ್ಲಿ ಕೆಲಸ ಮಾಡುತ್ತಿದ್ದ ಕೊಕ್ಕಡ ಗ್ರಾಮದ ಕೋರುಗದ್ದೆ ನಿವಾಸಿ ರಜತ್ ಭಂಡಾರಿ(25) ಎಂಬಾತ ಆ.25 ರಂದು ಬೆಳಗ್ಗೆ 9:50 ರ ಸಮಯದಲ್ಲಿರುವ ಅಂಗಡಿಗೆ ಕಿರಣ್ ಶಿಶಿಲ ಎಂಬಾತ KA-21-M-5560 ಎಂಬ ಕಾರಿನಲ್ಲಿ ಬಂದು ರಜತ್ ಎಂಬಾತನಲ್ಲಿ ಹೊರಗೆ ಬಾ ನಿನ್ನ ಜೊತೆ ಮಾತನಾಡಲಿ ಇದೆ ಎಂದು ಕರೆದಾಗ ಹೊರಗೆ ಬಾರದ ರಜತ್ ನನ್ನು ಅಂಗಡಿ ಒಳಗೆ ಅಕ್ರಮ ಪ್ರವೇಶಿಸಿ ರಜತ್ ಶಾರ್ಟ್ ನ ಕಾಲರ್ ಹಿಡಿದು ಅಂಗಡಿ ಹೊರಗೆ ಎಳೆದುಕೊಂಡು ಬಂದು ಅವ್ಯಾಚ ಶಬ್ದಗಳಿಂದ ಬೈದು ಧರ್ಮಸ್ಥಳದ ಪರ ಸ್ಟೇಟಸ್ ಹಾಕ್ತೀಯ ಎಂದು ಬೈದು ಎದೆಗೆ ,ಎಡಕೆನ್ನೆಗೆ ಕೈಯಿಂದ ಹೊಡೆದು ಕಾಲಿನಿಂದ ಮರ್ಮಾಂಗಕ್ಕೆ ಒದ್ದು ನೀನು ನನ್ನ ಮೇಲೆ ಪೊಲೀಸ್ ಠಾಣೆಗೆ ದೂರು ನೀಡಿದರೆ ನಿನ್ನನ್ನ ಚಾಕುವಿನಿಂದ ಕೊಲ್ಲುವುದಾಗಿ ಆರೋಪಿ ಕಿರಣ್ ಶಿಶಿಲ ಜೀವಬೆದರಿಕೆ ಹಾಕಿರುವುದಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲ್ಲೆಗೊಳಗಾದ ರಜತ್ ಭಂಡಾರಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಆ.25 ರಂದು ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.

ಕಿರಣ್ ಶಿಶಿಲನಿಂದ ಹಲ್ಲೆಗೊಳಗಾದ ರಜತ್ ಭಂಡಾರಿ ನೀಡಿದ ದೂರಿನ ಮೇರೆಗೆ ಆ.25 ರಂದು ಸಂಜೆ ಕಲಂ 329(4),352,115(2),351(2),110- BNS-2023 ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ಕಿರಣ್ ಶಿಶಿಲ ವಿರುದ್ಧ ಪ್ರಕರಣ ದಾಖಲಾಗಿದೆ.

Related posts

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಿಂದ ಪರಿಸರ ದಿನಾಚರಣೆ

Suddi Udaya

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya
error: Content is protected !!