25.8 C
ಪುತ್ತೂರು, ಬೆಳ್ತಂಗಡಿ
March 6, 2026
ರಾಜಕೀಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಾಲಾಡಿ ಮತ್ತು ಸೋಣಂದೂರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

ಮಾಲಾಡಿ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 25 ರಂದು ನಡೆದ ಮಾಲಾಡಿ ಮತ್ತು ಸೋಣಂದೂರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಮಾಲಾಡಿ ಕೊಲ್ಪೆದಬೈಲು ಎಸ್.ಕೆ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಶ್ರೀ ಲಿಂಗಪ್ಪ ಟೈಲರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪಕ್ಷದ ಹಿರಿಯ ಕಾರ್ಯಕರ್ತರಾದ ಶ್ರೀ ಪದ್ಮನಾಭ ಶೆಟ್ಟಿ ಅರ್ಕಜೆ ಉದ್ಘಾಟನಾ ಭಾಷಣ ಮಾಡಿ, ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಹಿರಿಯ ಕಾರ್ಯಕರ್ತರು ನಿರ್ವಹಿಸಿದ ಪಾತ್ರದ ಬಗ್ಗೆ ತಿಳಿಸಿದರು . ಶಾಸಕರಾದ ಶ್ರೀ ಹರೀಶ್ ಪೂಂಜಾ ರವರು ಮಾತನಾಡಿ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು. ಪ್ರಮುಖರಾದ ಶ್ರೀ ರವಿ ಇಳಂತಿಲ, ತಣ್ಣೀರು ಪಂಥ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಜಯಾನಂದ ಕಲ್ಲಾಪು , ಶಿರ್ಲಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಸುಧೀರ್ ಸುವರ್ಣ ಬೈಠಕ್ ನೀಡಿದರು. ಈ ಸಂದರ್ಭದಲ್ಲಿ ಕುವೆಟ್ಟು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರ ಕಾಂತಗೌಡ, ಪ್ರಧಾನ ಕಾರ್ಯದರ್ಶಿ ಶ್ರೀ ಪ್ರದೀಪ್ ಶೆಟ್ಟಿ,ಜಿಲ್ಲಾ ಭಾಜಪ ಕಾರ್ಯದರ್ಶಿ ಶ್ರೀಮತಿ ವಸಂತಿ ಮಚ್ಚಿನ, ಮಡಂತ್ಯಾರ್ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ, ಸಿ ಎ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಜೋಯಲ್ ಮೆಂಡೋನ್ಸ, ಪಕ್ಷದ ಪ್ರಮುಖ ರಾದ ಶ್ರೀ ನಂದಕುಮಾರ್ ಪಂಚಾಯತ್ ಸದಸ್ಯರು, ಸಿ.ಎ. ಬ್ಯಾಂಕ್ ನಿರ್ದೇಶಕರು, ಹಾಲು ಉತ್ಪಾದಕರ ಸಂಘ ನಿರ್ದೇಶಕರು,ಜನಪ್ರತಿನಿಧಿಗ ಳು,ಬೂತ್ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು, ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.ಶ್ರೀ ದಿನೇಶ್ ಕರ್ಕೇರ ಸ್ವಾಗತಿಸಿ, ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಉಜಿರೆ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya
error: Content is protected !!