23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

ಬೆಳ್ತಂಗಡಿ: ಮಹಿಳೆಯ ಗೆಳೆತನದ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ಆ.26ರಂದು ನಸುಕಿನ ವೇಳೆ ನಡೆದಿದೆ.

ಮೃತರನ್ನು ಮಂಗಳೂರು ಮೂಲದ ನವೀನ್‌ ಪೂಜಾರಿ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಬೆಳ್ತಂಗಡಿ ತಾಲೂಕು ನಡ ಗ್ರಾಮದ ನಿವಾಸಿ ಸಂಜೀವ ಗೌಡ ಎಂಬವರ ಪುತ್ರ ಪರೀಕ್ಷಿತ್(44ವ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಿನ ಜಾವ ನವೀನ್ ಪೂಜಾರಿ ಮೃತದೇಹವು ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರು ಚೂರಿ ಇರಿತರಿಂದ ಗಾಯಗೊಂಡು ಮೃತಪಟ್ಟಿರುವುದು ಕಂಡುಬಂದಿದೆ. ತನಿಖೆ ಮುಂದುವರೆಸಿ, ಸಿಸಿಟಿವಿಗಳನ್ನು ಹಾಗೂ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ಅವರನ್ನು ಪರೀಕ್ಷಿತ್ ಎಂಬಾತ ಕೊಲೆ ಮಾಡಿರುವುದು ತಿಳಿದುಬಂದಿದೆ. ಅದರಂತೆ ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್ ತಿಳಿಸಿದ್ದಾರೆ.

ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್‌ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.

ಪರೀಕ್ಷಿತ್‌ಗೆ ಪರಿಚಯ ಇರುವ ಮಹಿಳೆ ಜೊತೆ ನವೀನ್ ಪೂಜಾರಿ ಮಾತನಾಡುತಿದ್ದರು ಮತ್ತು ಗೆಳೆತನವನ್ನು ಬೆಳೆಸಿ ಆತ್ಮೀಯರಾಗಿದ್ದರು. ಇದು ಪರೀಕ್ಷಿತ್ ಇಷ್ಟ ಇಲ್ಲವಾಗಿತ್ತು. ಈ ವಿಚಾರದಲ್ಲಿ ಇವರ ಮಧ್ಯೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ನವೀನ್ ಪೂಜಾರಿಯನ್ನು ಪರೀಕ್ಷಿತ್‌ ಕೊಲೆ ಮಾಡಿದ್ದಾನೆ ಎಂಬುದಾಗಿ ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

Related posts

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ನ.11-13: ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಜ್ಞಾನದ ಉಚಿತ ತರಬೇತಿ

Suddi Udaya

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya
error: Content is protected !!