September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

ಬೆಳ್ತಂಗಡಿ: ಮಹಿಳೆಯ ಗೆಳೆತನದ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ಆ.26ರಂದು ನಸುಕಿನ ವೇಳೆ ನಡೆದಿದೆ.

ಮೃತರನ್ನು ಮಂಗಳೂರು ಮೂಲದ ನವೀನ್‌ ಪೂಜಾರಿ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಬೆಳ್ತಂಗಡಿ ತಾಲೂಕು ನಡ ಗ್ರಾಮದ ನಿವಾಸಿ ಸಂಜೀವ ಗೌಡ ಎಂಬವರ ಪುತ್ರ ಪರೀಕ್ಷಿತ್(44ವ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಿನ ಜಾವ ನವೀನ್ ಪೂಜಾರಿ ಮೃತದೇಹವು ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರು ಚೂರಿ ಇರಿತರಿಂದ ಗಾಯಗೊಂಡು ಮೃತಪಟ್ಟಿರುವುದು ಕಂಡುಬಂದಿದೆ. ತನಿಖೆ ಮುಂದುವರೆಸಿ, ಸಿಸಿಟಿವಿಗಳನ್ನು ಹಾಗೂ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ಅವರನ್ನು ಪರೀಕ್ಷಿತ್ ಎಂಬಾತ ಕೊಲೆ ಮಾಡಿರುವುದು ತಿಳಿದುಬಂದಿದೆ. ಅದರಂತೆ ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್ ತಿಳಿಸಿದ್ದಾರೆ.

ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್‌ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.

ಪರೀಕ್ಷಿತ್‌ಗೆ ಪರಿಚಯ ಇರುವ ಮಹಿಳೆ ಜೊತೆ ನವೀನ್ ಪೂಜಾರಿ ಮಾತನಾಡುತಿದ್ದರು ಮತ್ತು ಗೆಳೆತನವನ್ನು ಬೆಳೆಸಿ ಆತ್ಮೀಯರಾಗಿದ್ದರು. ಇದು ಪರೀಕ್ಷಿತ್ ಇಷ್ಟ ಇಲ್ಲವಾಗಿತ್ತು. ಈ ವಿಚಾರದಲ್ಲಿ ಇವರ ಮಧ್ಯೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ನವೀನ್ ಪೂಜಾರಿಯನ್ನು ಪರೀಕ್ಷಿತ್‌ ಕೊಲೆ ಮಾಡಿದ್ದಾನೆ ಎಂಬುದಾಗಿ ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

Related posts

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಹಾಕಿದ ಪ್ರಕರಣ; ಯುವತಿಗೆ ಜಾಮೀನು ಮಂಜೂರು

Suddi Udaya

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya
error: Content is protected !!