July 23, 2026
ಅಪರಾಧ ಸುದ್ದಿ

ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನ ದೂರು : ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂಪೇಜ್ ಮಾಲೀಕರು ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನ ಪಡಿಸಲಾಗಿದೆ ಎಂಬ ದೂರಿನಂತೆ ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನೆಲ್ ಮೇಲೆ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಗಿರೀಶ ಮಟ್ಟಣ್ಣವರ್‌ ಇವರು ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನಪಡಿಸುವ ಉದ್ದೇಶದಿಂದ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನೆಲ್ ಸಂದರ್ಶನದಲ್ಲಿ ಜೈನ ಧರ್ಮಕ್ಕೆ ಅಪಮಾನವಾಗುವ ರೀತಿಯಲ್ಲಿ ಸಂದರ್ಶನ ನೀಡಿದ್ದು, ಅಲ್ಲದೇ ಕುಡ್ಲ ರಾಂಪೇಜ್ ಚಾನೆಲ್ ಮಾಲೀಕರು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಆಪಾಧಿತರಿಬ್ಬರೂ ಜೈನ ಧರ್ಮೀಯರ ಧಾರ್ಮೀಕ ಭಾವನೆಗಳಿಗೆ ಅಪಮಾನಪಡಿ
ಸಿದಾರೆಂದು ಅಜಿತ್ ನಾಗಪ್ಪ ಬಸಾಪುರ್ ಹುಬ್ಬಳ್ಳಿ ರವರು ನೀಡಿದ ದೂರಿನಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರನ್ನು ಸರಹದ್ದಿನ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಕಳುಹಿಸಿಕೊಟ್ಟಿದ್ದನ್ನು ಮತ್ತು ಮಂಜುನಾಥ ಜಕ್ಕಣ್ಣವರ ಧಾರವಾಡ ರವರು ಧಾರವಾಡ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರಿನ ಘಟನೆಯು ಒಂದೇ ಆಗಿರುತ್ತದೆ, ಈ ಬಗ್ಗೆ ದೂರುದಾರರು ನೀಡಿದ ಹೇಳಿಕೆಯನ್ನು ದಾಖಾಲಿಸಿಕೊಂಡು ಆ 12 ರಂದು ಬೆಳ್ತಂಗಡಿ ಠಾಣಾ ಅಕ್ರ: 86/2025 ಕಲಂ.196(1) (ಎ) 299 ಬಿ.ಎನ್.ಎಸ್. 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ: ಮರು ತನಿಖೆಗೆ ಎಸ್.ಐ.ಟಿ ರಚಿಸಿ ರಾಜ್ಯ ಸರಕಾರ ಆದೇಶ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಚಿನ್ನಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಜಾ

Suddi Udaya
error: Content is protected !!