March 7, 2026
Uncategorized

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ಅನಧಿಕೃತವಾಗಿ ದೇವಾಲಯದ ಮಾಹಿತಿ ಪ್ರಕಟಿಸಿ ಭಕ್ತಾದಿಗಳಿಂದ ಸೇವಾ ಶುಲ್ಕ ವಸೂಲು
ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್‌ ಅವರು ಮಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು, ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಡುವ ದೇವಸ್ಥಾನದ ಮಾಹಿತಿಯನ್ನು ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಅನಧಿಕೃತವಾಗಿ ಬಳಸಿಕೊಂಡು ಭಕ್ತಾದಿಗಳನ್ನು ದಾರಿ ತಪ್ಪಿಸಿ ದುರುಪಯೋಗಪಡಿಸಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಭಕ್ತರು ದೇವಸ್ಥಾನದ ಸೇವೆಗಾಗಿ ಆನ್‌ ಲೈನ್‌ ಮೂಲಕ ₹150 ಪಾವತಿ ಸಬೇಕೆಂದು ತಿಳಿಸಿ ಮೋಸ ಮಾಡಲಾಗುತ್ತಿತ್ತು.
ಘಟನೆ ಬೆಳಕಿಗೆ :
ಆಗಸ್ಟ್ 26 ರಂದು ಭಕ್ತರಿಂದ 150‌ ರೂ. ಸಂಗ್ರಹಿಸಿದ ಅಪಾದಿತರು ಸೌತಡ್ಕ ದೇವಸ್ಥಾನಕ್ಕೆ ಬಂದು, ದೇವಸ್ಥಾನದಲ್ಲಿ ಯಾವುದೇ ಸೇವಾ ರಶೀದಿ ಮಾಡದೆ ಅರ್ಚಕರ ಮೂಲಕ ದೇವರಿಗೆ ಅರ್ಚನೆ ಮಾಡಿಸಿ ಅದರ ವಿಡಿಯೋವನ್ನು ತೆಗೆಯುತ್ತಿದ್ದ ವೇಳೆ ಈ ಘಟನೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಗಮನಕ್ಕೆ ಬಂತು.
ತಕ್ಷಣ ಸಮಿತಿಯವರು ವಿಷಯವನ್ನು ಪರಿಶೀಲಿಸಿ ನಾಲ್ವರು ಅಪಾದಿತರನ್ನು ಸ್ಥಳದಲ್ಲೇ ಹಿಡಿದು ಧರ್ಮಸ್ಥಳ ಪೊಲೀಸ್‌ ಠಾಣೆಯ ವಶಕ್ಕೆ ಒಪ್ಪಿಸಿದ್ದಾರೆ.

ಈ ಪ್ರಕರಣದ ಹಿನ್ನೆಲೆಯಲ್ಲಿ, ದೇವಸ್ಥಾನದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಭಕ್ತರನ್ನು ಮೋಸ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೇವಸ್ಥಾನ ಸಮಿತಿ ಹಾಗೂ ಆಡಳಿತ ಮಂಡಳಿ ಕಠಿಣ ನಿಲುವು ಕೈಗೊಂಡಿದೆ.

Related posts

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಜ.26: ಕುವೆಟ್ಟು-ಓಡಿಲ್ನಾಳ ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!