23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ಅನಧಿಕೃತವಾಗಿ ದೇವಾಲಯದ ಮಾಹಿತಿ ಪ್ರಕಟಿಸಿ ಭಕ್ತಾದಿಗಳಿಂದ ಸೇವಾ ಶುಲ್ಕ ವಸೂಲು
ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್‌ ಅವರು ಮಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು, ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಡುವ ದೇವಸ್ಥಾನದ ಮಾಹಿತಿಯನ್ನು ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಅನಧಿಕೃತವಾಗಿ ಬಳಸಿಕೊಂಡು ಭಕ್ತಾದಿಗಳನ್ನು ದಾರಿ ತಪ್ಪಿಸಿ ದುರುಪಯೋಗಪಡಿಸಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಭಕ್ತರು ದೇವಸ್ಥಾನದ ಸೇವೆಗಾಗಿ ಆನ್‌ ಲೈನ್‌ ಮೂಲಕ ₹150 ಪಾವತಿ ಸಬೇಕೆಂದು ತಿಳಿಸಿ ಮೋಸ ಮಾಡಲಾಗುತ್ತಿತ್ತು.
ಘಟನೆ ಬೆಳಕಿಗೆ :
ಆಗಸ್ಟ್ 26 ರಂದು ಭಕ್ತರಿಂದ 150‌ ರೂ. ಸಂಗ್ರಹಿಸಿದ ಅಪಾದಿತರು ಸೌತಡ್ಕ ದೇವಸ್ಥಾನಕ್ಕೆ ಬಂದು, ದೇವಸ್ಥಾನದಲ್ಲಿ ಯಾವುದೇ ಸೇವಾ ರಶೀದಿ ಮಾಡದೆ ಅರ್ಚಕರ ಮೂಲಕ ದೇವರಿಗೆ ಅರ್ಚನೆ ಮಾಡಿಸಿ ಅದರ ವಿಡಿಯೋವನ್ನು ತೆಗೆಯುತ್ತಿದ್ದ ವೇಳೆ ಈ ಘಟನೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಗಮನಕ್ಕೆ ಬಂತು.
ತಕ್ಷಣ ಸಮಿತಿಯವರು ವಿಷಯವನ್ನು ಪರಿಶೀಲಿಸಿ ನಾಲ್ವರು ಅಪಾದಿತರನ್ನು ಸ್ಥಳದಲ್ಲೇ ಹಿಡಿದು ಧರ್ಮಸ್ಥಳ ಪೊಲೀಸ್‌ ಠಾಣೆಯ ವಶಕ್ಕೆ ಒಪ್ಪಿಸಿದ್ದಾರೆ.

ಈ ಪ್ರಕರಣದ ಹಿನ್ನೆಲೆಯಲ್ಲಿ, ದೇವಸ್ಥಾನದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಭಕ್ತರನ್ನು ಮೋಸ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೇವಸ್ಥಾನ ಸಮಿತಿ ಹಾಗೂ ಆಡಳಿತ ಮಂಡಳಿ ಕಠಿಣ ನಿಲುವು ಕೈಗೊಂಡಿದೆ.

Related posts

ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನಿತಿನ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಆಪರೇಷನ್ ಸಿಂಧೂರ: ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!