23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

ಬೆಳ್ತಂಗಡಿ: ಮಹಿಳೆಯ ಗೆಳೆತನದ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ಆ.26ರಂದು ನಸುಕಿನ ವೇಳೆ ನಡೆದಿದೆ.

ಮೃತರನ್ನು ಮಂಗಳೂರು ಮೂಲದ ನವೀನ್‌ ಪೂಜಾರಿ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಬೆಳ್ತಂಗಡಿ ತಾಲೂಕು ನಡ ಗ್ರಾಮದ ನಿವಾಸಿ ಸಂಜೀವ ಗೌಡ ಎಂಬವರ ಪುತ್ರ ಪರೀಕ್ಷಿತ್(44ವ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಿನ ಜಾವ ನವೀನ್ ಪೂಜಾರಿ ಮೃತದೇಹವು ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರು ಚೂರಿ ಇರಿತರಿಂದ ಗಾಯಗೊಂಡು ಮೃತಪಟ್ಟಿರುವುದು ಕಂಡುಬಂದಿದೆ. ತನಿಖೆ ಮುಂದುವರೆಸಿ, ಸಿಸಿಟಿವಿಗಳನ್ನು ಹಾಗೂ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ಅವರನ್ನು ಪರೀಕ್ಷಿತ್ ಎಂಬಾತ ಕೊಲೆ ಮಾಡಿರುವುದು ತಿಳಿದುಬಂದಿದೆ. ಅದರಂತೆ ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್ ತಿಳಿಸಿದ್ದಾರೆ.

ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್‌ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.

ಪರೀಕ್ಷಿತ್‌ಗೆ ಪರಿಚಯ ಇರುವ ಮಹಿಳೆ ಜೊತೆ ನವೀನ್ ಪೂಜಾರಿ ಮಾತನಾಡುತಿದ್ದರು ಮತ್ತು ಗೆಳೆತನವನ್ನು ಬೆಳೆಸಿ ಆತ್ಮೀಯರಾಗಿದ್ದರು. ಇದು ಪರೀಕ್ಷಿತ್ ಇಷ್ಟ ಇಲ್ಲವಾಗಿತ್ತು. ಈ ವಿಚಾರದಲ್ಲಿ ಇವರ ಮಧ್ಯೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ನವೀನ್ ಪೂಜಾರಿಯನ್ನು ಪರೀಕ್ಷಿತ್‌ ಕೊಲೆ ಮಾಡಿದ್ದಾನೆ ಎಂಬುದಾಗಿ ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

Related posts

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya
error: Content is protected !!