22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

ಬೆಳ್ತಂಗಡಿ: ಮಹಿಳೆಯ ಗೆಳೆತನದ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ಆ.26ರಂದು ನಸುಕಿನ ವೇಳೆ ನಡೆದಿದೆ.

ಮೃತರನ್ನು ಮಂಗಳೂರು ಮೂಲದ ನವೀನ್‌ ಪೂಜಾರಿ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಬೆಳ್ತಂಗಡಿ ತಾಲೂಕು ನಡ ಗ್ರಾಮದ ನಿವಾಸಿ ಸಂಜೀವ ಗೌಡ ಎಂಬವರ ಪುತ್ರ ಪರೀಕ್ಷಿತ್(44ವ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಿನ ಜಾವ ನವೀನ್ ಪೂಜಾರಿ ಮೃತದೇಹವು ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರು ಚೂರಿ ಇರಿತರಿಂದ ಗಾಯಗೊಂಡು ಮೃತಪಟ್ಟಿರುವುದು ಕಂಡುಬಂದಿದೆ. ತನಿಖೆ ಮುಂದುವರೆಸಿ, ಸಿಸಿಟಿವಿಗಳನ್ನು ಹಾಗೂ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ಅವರನ್ನು ಪರೀಕ್ಷಿತ್ ಎಂಬಾತ ಕೊಲೆ ಮಾಡಿರುವುದು ತಿಳಿದುಬಂದಿದೆ. ಅದರಂತೆ ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್ ತಿಳಿಸಿದ್ದಾರೆ.

ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್‌ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.

ಪರೀಕ್ಷಿತ್‌ಗೆ ಪರಿಚಯ ಇರುವ ಮಹಿಳೆ ಜೊತೆ ನವೀನ್ ಪೂಜಾರಿ ಮಾತನಾಡುತಿದ್ದರು ಮತ್ತು ಗೆಳೆತನವನ್ನು ಬೆಳೆಸಿ ಆತ್ಮೀಯರಾಗಿದ್ದರು. ಇದು ಪರೀಕ್ಷಿತ್ ಇಷ್ಟ ಇಲ್ಲವಾಗಿತ್ತು. ಈ ವಿಚಾರದಲ್ಲಿ ಇವರ ಮಧ್ಯೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ನವೀನ್ ಪೂಜಾರಿಯನ್ನು ಪರೀಕ್ಷಿತ್‌ ಕೊಲೆ ಮಾಡಿದ್ದಾನೆ ಎಂಬುದಾಗಿ ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

Related posts

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya
error: Content is protected !!