24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

ಬೆಳ್ತಂಗಡಿ: ಮಹಿಳೆಯ ಗೆಳೆತನದ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ಆ.26ರಂದು ನಸುಕಿನ ವೇಳೆ ನಡೆದಿದೆ.

ಮೃತರನ್ನು ಮಂಗಳೂರು ಮೂಲದ ನವೀನ್‌ ಪೂಜಾರಿ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಬೆಳ್ತಂಗಡಿ ತಾಲೂಕು ನಡ ಗ್ರಾಮದ ನಿವಾಸಿ ಸಂಜೀವ ಗೌಡ ಎಂಬವರ ಪುತ್ರ ಪರೀಕ್ಷಿತ್(44ವ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಿನ ಜಾವ ನವೀನ್ ಪೂಜಾರಿ ಮೃತದೇಹವು ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರು ಚೂರಿ ಇರಿತರಿಂದ ಗಾಯಗೊಂಡು ಮೃತಪಟ್ಟಿರುವುದು ಕಂಡುಬಂದಿದೆ. ತನಿಖೆ ಮುಂದುವರೆಸಿ, ಸಿಸಿಟಿವಿಗಳನ್ನು ಹಾಗೂ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ಅವರನ್ನು ಪರೀಕ್ಷಿತ್ ಎಂಬಾತ ಕೊಲೆ ಮಾಡಿರುವುದು ತಿಳಿದುಬಂದಿದೆ. ಅದರಂತೆ ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್ ತಿಳಿಸಿದ್ದಾರೆ.

ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್‌ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.

ಪರೀಕ್ಷಿತ್‌ಗೆ ಪರಿಚಯ ಇರುವ ಮಹಿಳೆ ಜೊತೆ ನವೀನ್ ಪೂಜಾರಿ ಮಾತನಾಡುತಿದ್ದರು ಮತ್ತು ಗೆಳೆತನವನ್ನು ಬೆಳೆಸಿ ಆತ್ಮೀಯರಾಗಿದ್ದರು. ಇದು ಪರೀಕ್ಷಿತ್ ಇಷ್ಟ ಇಲ್ಲವಾಗಿತ್ತು. ಈ ವಿಚಾರದಲ್ಲಿ ಇವರ ಮಧ್ಯೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ನವೀನ್ ಪೂಜಾರಿಯನ್ನು ಪರೀಕ್ಷಿತ್‌ ಕೊಲೆ ಮಾಡಿದ್ದಾನೆ ಎಂಬುದಾಗಿ ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

Related posts

ಮುಸುಕುಧಾರಿಗಳಿಂದ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಚೂರಿಯಿಂದ ಇರಿದು ಹಲ್ಲೆ : ವಿದ್ಯಾರ್ಥಿನಿ ಆಸ್ಪತ್ರೆಗೆ -ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಜಂಇಯ್ಯತುಲ್ ಉಲಮಾ ಶತಮಾನೋತ್ಸವ, ಗುರುವಾಯನಕೆರೆ ಮಸ್ಜಿದ್ ನಲ್ಲಿ ಧ್ವಜಾರೋಹಣ

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya
error: Content is protected !!