July 23, 2026
ಅಪರಾಧ ಸುದ್ದಿ

ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನ ದೂರು : ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂಪೇಜ್ ಮಾಲೀಕರು ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನ ಪಡಿಸಲಾಗಿದೆ ಎಂಬ ದೂರಿನಂತೆ ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನೆಲ್ ಮೇಲೆ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಗಿರೀಶ ಮಟ್ಟಣ್ಣವರ್‌ ಇವರು ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನಪಡಿಸುವ ಉದ್ದೇಶದಿಂದ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನೆಲ್ ಸಂದರ್ಶನದಲ್ಲಿ ಜೈನ ಧರ್ಮಕ್ಕೆ ಅಪಮಾನವಾಗುವ ರೀತಿಯಲ್ಲಿ ಸಂದರ್ಶನ ನೀಡಿದ್ದು, ಅಲ್ಲದೇ ಕುಡ್ಲ ರಾಂಪೇಜ್ ಚಾನೆಲ್ ಮಾಲೀಕರು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಆಪಾಧಿತರಿಬ್ಬರೂ ಜೈನ ಧರ್ಮೀಯರ ಧಾರ್ಮೀಕ ಭಾವನೆಗಳಿಗೆ ಅಪಮಾನಪಡಿ
ಸಿದಾರೆಂದು ಅಜಿತ್ ನಾಗಪ್ಪ ಬಸಾಪುರ್ ಹುಬ್ಬಳ್ಳಿ ರವರು ನೀಡಿದ ದೂರಿನಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರನ್ನು ಸರಹದ್ದಿನ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಕಳುಹಿಸಿಕೊಟ್ಟಿದ್ದನ್ನು ಮತ್ತು ಮಂಜುನಾಥ ಜಕ್ಕಣ್ಣವರ ಧಾರವಾಡ ರವರು ಧಾರವಾಡ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರಿನ ಘಟನೆಯು ಒಂದೇ ಆಗಿರುತ್ತದೆ, ಈ ಬಗ್ಗೆ ದೂರುದಾರರು ನೀಡಿದ ಹೇಳಿಕೆಯನ್ನು ದಾಖಾಲಿಸಿಕೊಂಡು ಆ 12 ರಂದು ಬೆಳ್ತಂಗಡಿ ಠಾಣಾ ಅಕ್ರ: 86/2025 ಕಲಂ.196(1) (ಎ) 299 ಬಿ.ಎನ್.ಎಸ್. 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ:ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದವರನ್ನು ತಡೆದು ಜೀವಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!