22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ಅನಧಿಕೃತವಾಗಿ ದೇವಾಲಯದ ಮಾಹಿತಿ ಪ್ರಕಟಿಸಿ ಭಕ್ತಾದಿಗಳಿಂದ ಸೇವಾ ಶುಲ್ಕ ವಸೂಲು
ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್‌ ಅವರು ಮಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು, ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಡುವ ದೇವಸ್ಥಾನದ ಮಾಹಿತಿಯನ್ನು ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಅನಧಿಕೃತವಾಗಿ ಬಳಸಿಕೊಂಡು ಭಕ್ತಾದಿಗಳನ್ನು ದಾರಿ ತಪ್ಪಿಸಿ ದುರುಪಯೋಗಪಡಿಸಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಭಕ್ತರು ದೇವಸ್ಥಾನದ ಸೇವೆಗಾಗಿ ಆನ್‌ ಲೈನ್‌ ಮೂಲಕ ₹150 ಪಾವತಿ ಸಬೇಕೆಂದು ತಿಳಿಸಿ ಮೋಸ ಮಾಡಲಾಗುತ್ತಿತ್ತು.
ಘಟನೆ ಬೆಳಕಿಗೆ :
ಆಗಸ್ಟ್ 26 ರಂದು ಭಕ್ತರಿಂದ 150‌ ರೂ. ಸಂಗ್ರಹಿಸಿದ ಅಪಾದಿತರು ಸೌತಡ್ಕ ದೇವಸ್ಥಾನಕ್ಕೆ ಬಂದು, ದೇವಸ್ಥಾನದಲ್ಲಿ ಯಾವುದೇ ಸೇವಾ ರಶೀದಿ ಮಾಡದೆ ಅರ್ಚಕರ ಮೂಲಕ ದೇವರಿಗೆ ಅರ್ಚನೆ ಮಾಡಿಸಿ ಅದರ ವಿಡಿಯೋವನ್ನು ತೆಗೆಯುತ್ತಿದ್ದ ವೇಳೆ ಈ ಘಟನೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಗಮನಕ್ಕೆ ಬಂತು.
ತಕ್ಷಣ ಸಮಿತಿಯವರು ವಿಷಯವನ್ನು ಪರಿಶೀಲಿಸಿ ನಾಲ್ವರು ಅಪಾದಿತರನ್ನು ಸ್ಥಳದಲ್ಲೇ ಹಿಡಿದು ಧರ್ಮಸ್ಥಳ ಪೊಲೀಸ್‌ ಠಾಣೆಯ ವಶಕ್ಕೆ ಒಪ್ಪಿಸಿದ್ದಾರೆ.

ಈ ಪ್ರಕರಣದ ಹಿನ್ನೆಲೆಯಲ್ಲಿ, ದೇವಸ್ಥಾನದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಭಕ್ತರನ್ನು ಮೋಸ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೇವಸ್ಥಾನ ಸಮಿತಿ ಹಾಗೂ ಆಡಳಿತ ಮಂಡಳಿ ಕಠಿಣ ನಿಲುವು ಕೈಗೊಂಡಿದೆ.

Related posts

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಖಂಡನೆ: ಜಿಲ್ಲಾ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ : ಬೆಳ್ತಂಗಡಿ ತಾಲೂಕಿನ ಪೇಟೆಗಳಲ್ಲಿ ಭಾಗಶಃ ಅಂಗಡಿ-ಮುಂಗಟ್ಟುಗಳು ಬಂದ್

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

Suddi Udaya

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya
error: Content is protected !!