25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ಅನಧಿಕೃತವಾಗಿ ದೇವಾಲಯದ ಮಾಹಿತಿ ಪ್ರಕಟಿಸಿ ಭಕ್ತಾದಿಗಳಿಂದ ಸೇವಾ ಶುಲ್ಕ ವಸೂಲು
ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್‌ ಅವರು ಮಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು, ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಡುವ ದೇವಸ್ಥಾನದ ಮಾಹಿತಿಯನ್ನು ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಅನಧಿಕೃತವಾಗಿ ಬಳಸಿಕೊಂಡು ಭಕ್ತಾದಿಗಳನ್ನು ದಾರಿ ತಪ್ಪಿಸಿ ದುರುಪಯೋಗಪಡಿಸಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಭಕ್ತರು ದೇವಸ್ಥಾನದ ಸೇವೆಗಾಗಿ ಆನ್‌ ಲೈನ್‌ ಮೂಲಕ ₹150 ಪಾವತಿ ಸಬೇಕೆಂದು ತಿಳಿಸಿ ಮೋಸ ಮಾಡಲಾಗುತ್ತಿತ್ತು.
ಘಟನೆ ಬೆಳಕಿಗೆ :
ಆಗಸ್ಟ್ 26 ರಂದು ಭಕ್ತರಿಂದ 150‌ ರೂ. ಸಂಗ್ರಹಿಸಿದ ಅಪಾದಿತರು ಸೌತಡ್ಕ ದೇವಸ್ಥಾನಕ್ಕೆ ಬಂದು, ದೇವಸ್ಥಾನದಲ್ಲಿ ಯಾವುದೇ ಸೇವಾ ರಶೀದಿ ಮಾಡದೆ ಅರ್ಚಕರ ಮೂಲಕ ದೇವರಿಗೆ ಅರ್ಚನೆ ಮಾಡಿಸಿ ಅದರ ವಿಡಿಯೋವನ್ನು ತೆಗೆಯುತ್ತಿದ್ದ ವೇಳೆ ಈ ಘಟನೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಗಮನಕ್ಕೆ ಬಂತು.
ತಕ್ಷಣ ಸಮಿತಿಯವರು ವಿಷಯವನ್ನು ಪರಿಶೀಲಿಸಿ ನಾಲ್ವರು ಅಪಾದಿತರನ್ನು ಸ್ಥಳದಲ್ಲೇ ಹಿಡಿದು ಧರ್ಮಸ್ಥಳ ಪೊಲೀಸ್‌ ಠಾಣೆಯ ವಶಕ್ಕೆ ಒಪ್ಪಿಸಿದ್ದಾರೆ.

ಈ ಪ್ರಕರಣದ ಹಿನ್ನೆಲೆಯಲ್ಲಿ, ದೇವಸ್ಥಾನದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಭಕ್ತರನ್ನು ಮೋಸ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೇವಸ್ಥಾನ ಸಮಿತಿ ಹಾಗೂ ಆಡಳಿತ ಮಂಡಳಿ ಕಠಿಣ ನಿಲುವು ಕೈಗೊಂಡಿದೆ.

Related posts

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

Suddi Udaya
error: Content is protected !!