24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ಅನಧಿಕೃತವಾಗಿ ದೇವಾಲಯದ ಮಾಹಿತಿ ಪ್ರಕಟಿಸಿ ಭಕ್ತಾದಿಗಳಿಂದ ಸೇವಾ ಶುಲ್ಕ ವಸೂಲು
ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್‌ ಅವರು ಮಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು, ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಡುವ ದೇವಸ್ಥಾನದ ಮಾಹಿತಿಯನ್ನು ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಅನಧಿಕೃತವಾಗಿ ಬಳಸಿಕೊಂಡು ಭಕ್ತಾದಿಗಳನ್ನು ದಾರಿ ತಪ್ಪಿಸಿ ದುರುಪಯೋಗಪಡಿಸಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಭಕ್ತರು ದೇವಸ್ಥಾನದ ಸೇವೆಗಾಗಿ ಆನ್‌ ಲೈನ್‌ ಮೂಲಕ ₹150 ಪಾವತಿ ಸಬೇಕೆಂದು ತಿಳಿಸಿ ಮೋಸ ಮಾಡಲಾಗುತ್ತಿತ್ತು.
ಘಟನೆ ಬೆಳಕಿಗೆ :
ಆಗಸ್ಟ್ 26 ರಂದು ಭಕ್ತರಿಂದ 150‌ ರೂ. ಸಂಗ್ರಹಿಸಿದ ಅಪಾದಿತರು ಸೌತಡ್ಕ ದೇವಸ್ಥಾನಕ್ಕೆ ಬಂದು, ದೇವಸ್ಥಾನದಲ್ಲಿ ಯಾವುದೇ ಸೇವಾ ರಶೀದಿ ಮಾಡದೆ ಅರ್ಚಕರ ಮೂಲಕ ದೇವರಿಗೆ ಅರ್ಚನೆ ಮಾಡಿಸಿ ಅದರ ವಿಡಿಯೋವನ್ನು ತೆಗೆಯುತ್ತಿದ್ದ ವೇಳೆ ಈ ಘಟನೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಗಮನಕ್ಕೆ ಬಂತು.
ತಕ್ಷಣ ಸಮಿತಿಯವರು ವಿಷಯವನ್ನು ಪರಿಶೀಲಿಸಿ ನಾಲ್ವರು ಅಪಾದಿತರನ್ನು ಸ್ಥಳದಲ್ಲೇ ಹಿಡಿದು ಧರ್ಮಸ್ಥಳ ಪೊಲೀಸ್‌ ಠಾಣೆಯ ವಶಕ್ಕೆ ಒಪ್ಪಿಸಿದ್ದಾರೆ.

ಈ ಪ್ರಕರಣದ ಹಿನ್ನೆಲೆಯಲ್ಲಿ, ದೇವಸ್ಥಾನದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಭಕ್ತರನ್ನು ಮೋಸ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೇವಸ್ಥಾನ ಸಮಿತಿ ಹಾಗೂ ಆಡಳಿತ ಮಂಡಳಿ ಕಠಿಣ ನಿಲುವು ಕೈಗೊಂಡಿದೆ.

Related posts

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya
error: Content is protected !!