September 6, 2026
Uncategorized

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ಅನಧಿಕೃತವಾಗಿ ದೇವಾಲಯದ ಮಾಹಿತಿ ಪ್ರಕಟಿಸಿ ಭಕ್ತಾದಿಗಳಿಂದ ಸೇವಾ ಶುಲ್ಕ ವಸೂಲು
ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್‌ ಅವರು ಮಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು, ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಡುವ ದೇವಸ್ಥಾನದ ಮಾಹಿತಿಯನ್ನು ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಅನಧಿಕೃತವಾಗಿ ಬಳಸಿಕೊಂಡು ಭಕ್ತಾದಿಗಳನ್ನು ದಾರಿ ತಪ್ಪಿಸಿ ದುರುಪಯೋಗಪಡಿಸಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಇನ್‌ಸ್ಟಾ ಗ್ರಾಮ್ ಪೇಜ್‌ ನಲ್ಲಿ ಭಕ್ತರು ದೇವಸ್ಥಾನದ ಸೇವೆಗಾಗಿ ಆನ್‌ ಲೈನ್‌ ಮೂಲಕ ₹150 ಪಾವತಿ ಸಬೇಕೆಂದು ತಿಳಿಸಿ ಮೋಸ ಮಾಡಲಾಗುತ್ತಿತ್ತು.
ಘಟನೆ ಬೆಳಕಿಗೆ :
ಆಗಸ್ಟ್ 26 ರಂದು ಭಕ್ತರಿಂದ 150‌ ರೂ. ಸಂಗ್ರಹಿಸಿದ ಅಪಾದಿತರು ಸೌತಡ್ಕ ದೇವಸ್ಥಾನಕ್ಕೆ ಬಂದು, ದೇವಸ್ಥಾನದಲ್ಲಿ ಯಾವುದೇ ಸೇವಾ ರಶೀದಿ ಮಾಡದೆ ಅರ್ಚಕರ ಮೂಲಕ ದೇವರಿಗೆ ಅರ್ಚನೆ ಮಾಡಿಸಿ ಅದರ ವಿಡಿಯೋವನ್ನು ತೆಗೆಯುತ್ತಿದ್ದ ವೇಳೆ ಈ ಘಟನೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಗಮನಕ್ಕೆ ಬಂತು.
ತಕ್ಷಣ ಸಮಿತಿಯವರು ವಿಷಯವನ್ನು ಪರಿಶೀಲಿಸಿ ನಾಲ್ವರು ಅಪಾದಿತರನ್ನು ಸ್ಥಳದಲ್ಲೇ ಹಿಡಿದು ಧರ್ಮಸ್ಥಳ ಪೊಲೀಸ್‌ ಠಾಣೆಯ ವಶಕ್ಕೆ ಒಪ್ಪಿಸಿದ್ದಾರೆ.

ಈ ಪ್ರಕರಣದ ಹಿನ್ನೆಲೆಯಲ್ಲಿ, ದೇವಸ್ಥಾನದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಭಕ್ತರನ್ನು ಮೋಸ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೇವಸ್ಥಾನ ಸಮಿತಿ ಹಾಗೂ ಆಡಳಿತ ಮಂಡಳಿ ಕಠಿಣ ನಿಲುವು ಕೈಗೊಂಡಿದೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರಿಂದ ಗುರುದ್ವಾರ ಭೇಟಿ

Suddi Udaya
error: Content is protected !!