March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

ಬೆಳ್ತಂಗಡಿ: ಮಹಿಳೆಯ ಗೆಳೆತನದ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ಆ.26ರಂದು ನಸುಕಿನ ವೇಳೆ ನಡೆದಿದೆ.

ಮೃತರನ್ನು ಮಂಗಳೂರು ಮೂಲದ ನವೀನ್‌ ಪೂಜಾರಿ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಬೆಳ್ತಂಗಡಿ ತಾಲೂಕು ನಡ ಗ್ರಾಮದ ನಿವಾಸಿ ಸಂಜೀವ ಗೌಡ ಎಂಬವರ ಪುತ್ರ ಪರೀಕ್ಷಿತ್(44ವ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಿನ ಜಾವ ನವೀನ್ ಪೂಜಾರಿ ಮೃತದೇಹವು ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರು ಚೂರಿ ಇರಿತರಿಂದ ಗಾಯಗೊಂಡು ಮೃತಪಟ್ಟಿರುವುದು ಕಂಡುಬಂದಿದೆ. ತನಿಖೆ ಮುಂದುವರೆಸಿ, ಸಿಸಿಟಿವಿಗಳನ್ನು ಹಾಗೂ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ಅವರನ್ನು ಪರೀಕ್ಷಿತ್ ಎಂಬಾತ ಕೊಲೆ ಮಾಡಿರುವುದು ತಿಳಿದುಬಂದಿದೆ. ಅದರಂತೆ ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್ ತಿಳಿಸಿದ್ದಾರೆ.

ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್‌ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.

ಪರೀಕ್ಷಿತ್‌ಗೆ ಪರಿಚಯ ಇರುವ ಮಹಿಳೆ ಜೊತೆ ನವೀನ್ ಪೂಜಾರಿ ಮಾತನಾಡುತಿದ್ದರು ಮತ್ತು ಗೆಳೆತನವನ್ನು ಬೆಳೆಸಿ ಆತ್ಮೀಯರಾಗಿದ್ದರು. ಇದು ಪರೀಕ್ಷಿತ್ ಇಷ್ಟ ಇಲ್ಲವಾಗಿತ್ತು. ಈ ವಿಚಾರದಲ್ಲಿ ಇವರ ಮಧ್ಯೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ನವೀನ್ ಪೂಜಾರಿಯನ್ನು ಪರೀಕ್ಷಿತ್‌ ಕೊಲೆ ಮಾಡಿದ್ದಾನೆ ಎಂಬುದಾಗಿ ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

Related posts

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಆ.17: ನಾಲ್ಕೂರಿನಲ್ಲಿ 3ನೇ ವರ್ಷದ ಮೊಸರು ಕುಡಿಕೆ ಉತ್ಸವ, ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya
error: Content is protected !!