24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

ಬೆಳ್ತಂಗಡಿ: ಮಹಿಳೆಯ ಗೆಳೆತನದ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ಆ.26ರಂದು ನಸುಕಿನ ವೇಳೆ ನಡೆದಿದೆ.

ಮೃತರನ್ನು ಮಂಗಳೂರು ಮೂಲದ ನವೀನ್‌ ಪೂಜಾರಿ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಬೆಳ್ತಂಗಡಿ ತಾಲೂಕು ನಡ ಗ್ರಾಮದ ನಿವಾಸಿ ಸಂಜೀವ ಗೌಡ ಎಂಬವರ ಪುತ್ರ ಪರೀಕ್ಷಿತ್(44ವ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಿನ ಜಾವ ನವೀನ್ ಪೂಜಾರಿ ಮೃತದೇಹವು ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರು ಚೂರಿ ಇರಿತರಿಂದ ಗಾಯಗೊಂಡು ಮೃತಪಟ್ಟಿರುವುದು ಕಂಡುಬಂದಿದೆ. ತನಿಖೆ ಮುಂದುವರೆಸಿ, ಸಿಸಿಟಿವಿಗಳನ್ನು ಹಾಗೂ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ಅವರನ್ನು ಪರೀಕ್ಷಿತ್ ಎಂಬಾತ ಕೊಲೆ ಮಾಡಿರುವುದು ತಿಳಿದುಬಂದಿದೆ. ಅದರಂತೆ ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್ ತಿಳಿಸಿದ್ದಾರೆ.

ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್‌ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಈತ ತನ್ನ ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿ ಕೊಂಡಿದ್ದಾನೆ. ಅದೇ ರೀತಿ ನವೀನ್ ಪೂಜಾರಿ ಪತ್ನಿ ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದು, ಈತ ಅವರಿಂದ ನಾಲೈದು ವರ್ಷಗಳಿಂದ ದೂರು ಇದ್ದು ವಾಸ ಮಾಡಿಕೊಂಡಿದ್ದಾರೆ.

ಪರೀಕ್ಷಿತ್‌ಗೆ ಪರಿಚಯ ಇರುವ ಮಹಿಳೆ ಜೊತೆ ನವೀನ್ ಪೂಜಾರಿ ಮಾತನಾಡುತಿದ್ದರು ಮತ್ತು ಗೆಳೆತನವನ್ನು ಬೆಳೆಸಿ ಆತ್ಮೀಯರಾಗಿದ್ದರು. ಇದು ಪರೀಕ್ಷಿತ್ ಇಷ್ಟ ಇಲ್ಲವಾಗಿತ್ತು. ಈ ವಿಚಾರದಲ್ಲಿ ಇವರ ಮಧ್ಯೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ನವೀನ್ ಪೂಜಾರಿಯನ್ನು ಪರೀಕ್ಷಿತ್‌ ಕೊಲೆ ಮಾಡಿದ್ದಾನೆ ಎಂಬುದಾಗಿ ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

Related posts

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya
error: Content is protected !!